Home ಆರೋಗ್ಯ ಪ್ರಧಾನಿ ಮೋದಿಗೆ ಪಾರಂಪರಿಕ ನಾಟಿ ವೈದ್ಯರಿಂದ ಪತ್ರ ಚಳವಳಿ
ಆರೋಗ್ಯ

ಪ್ರಧಾನಿ ಮೋದಿಗೆ ಪಾರಂಪರಿಕ ನಾಟಿ ವೈದ್ಯರಿಂದ ಪತ್ರ ಚಳವಳಿ

Share
NATI VAIDYARU
Share

ಹರಪನಹಳ್ಳಿ : ನಾಟಿ ವೈದ್ಯರನ್ನು ಸರ್ಕಾರಿ ಆಯುಷ್ (AYUSH) ವಿಭಾಗದಡಿ ಸೇರಿಸಿ, ಅವರಿಗೆ ಅಧಿಕೃತ ‘ರಾಷ್ಟ್ರೀಯ ನೋಂದಣಿ ಸಂಖ್ಯೆ’ ಹಾಗೂ ‘ಗುರುತಿನ ಚೀಟಿ’ ನೀಡಬೇಕು ಎಂದು ಆಗ್ರಹಿಸಿ ಇಲ್ಲಿಯ ಪಾರಂಪರಿಕ ನಾಟಿ ವೈದ್ಯರ ಸಂಘ ಪ್ರಧಾನಿ ನರೇಂದ್ರಮೋದಿ ಅವರಿಗೆ ಪತ್ರ ಚಳವಳಿಗೆ ಶನಿವಾರ ಚಾಲನೆ ನೀಡಿದ್ದಾರೆ.

 ಕರ್ನಾಟಕದ ಸಾಂಪ್ರದಾಯಿಕ ನಾಟಿ ವೈದ್ಯರು ತಮಗೆ ಸರ್ಕಾರದಿಂದ ಅಧಿಕೃತ ಮಾನ್ಯತೆ ನೀಡುವಂತೆ ಆಗ್ರಹಿಸಿ ನೇರವಾಗಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರಿಗೆ ಮನವಿ ಪತ್ರವೊಂದನ್ನು ಸಲ್ಲಿಸಿದ್ದಾರೆ.

ಕರೋನಾ ಮಹಾಮಾರಿ ಇಡೀ ದೇಶವನ್ನೇ ಕಾಡಿದ ಸಂದರ್ಭದಲ್ಲಿ, ಹಳ್ಳಿಗಳಲ್ಲಿ ಉಚಿತವಾಗಿ ಕಷಾಯ ವಿತರಿಸುವ ಮೂಲಕ ರೋಗ ನಿಯಂತ್ರಣದಲ್ಲಿ ನಮ್ಮ ನಾಟಿ ವೈದ್ಯರು ಪ್ರಮುಖ ಪಾತ್ರ ವಹಿಸಿದ್ದರು. ಇಂದಿಗೂ ಅನೇಕ ದೀರ್ಘಕಾಲದ ಕಾಯಿಲೆಗಳಿಗೆ, ಮನುಷ್ಯರಿಗೆ ಮಾತ್ರವಲ್ಲದೆ ಜಾನುವಾರುಗಳಿಗೂ ಗಿಡಮೂಲಿಕೆಗಳ ಮೂಲಕ ಯಶಸ್ವಿಯಾಗಿ ಚಿಕಿತ್ಸೆ ನೀಡುತ್ತಿದ್ದಾರೆ.

ನಾಟಿ ವೈದ್ಯರಿಗೆ ಯಾವುದೇ ಸರ್ಕಾರಿ ಮಾನ್ಯತೆ ಇಲ್ಲದಿರುವುದರಿಂದ ಅವರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.  ನಮ್ಮ ಸಾಂಪ್ರದಾಯಿಕ ವೈದ್ಯಕೀಯ ಪದ್ಧತಿಗಳ ಸಂಶೋಧನೆ ಹಾಗೂ ಅಭಿವೃದ್ಧಿಗೆ ಸರ್ಕಾರವು ನೆರವು ನೀಡಬೇಕು. ನಾಟಿ ವೈದ್ಯಕೀಯದಲ್ಲಿ ಜ್ಞಾನ ಮತ್ತು ಅರ್ಹತೆ ಹೊಂದಿರುವ ವ್ಯಕ್ತಿಗಳಿಗೆ ಸರ್ಕಾರದಿಂದಲೇ ಅಧಿಕೃತ ಪ್ರಮಾಣಪತ್ರ (ಸರ್ಟಿಫಿಕೇಟ್) ನೀಡುವ ವ್ಯವಸ್ಥೆಯಾಗಬೇಕು.

ಪಾರಂಪರಿಕ ವೈದ್ಯಕೀಯ ಪದ್ಧತಿಗಳ ನಿರ್ವಹಣೆಗಾಗಿ ಆಯುಷ್ ಸಚಿವಾಲಯದಲ್ಲಿಯೇ ಒಂದು ಪ್ರತ್ಯೇಕ ಮಂಡಳಿ ಅಥವಾ ವಿಭಾಗವನ್ನು ಸ್ಥಾಪಿಸಬೇಕು. ಗ್ರಾಮೀಣ ಭಾಗಗಳಲ್ಲಿ ‘ನಾಟಿ ಚಿಕಿತ್ಸಾ ಕೇಂದ್ರ’ಗಳನ್ನು ಸ್ಥಾಪಿಸಲು ಹಾಗೂ ನಾಟಿ ವೈದ್ಯರ ಸೇವೆಗೆ ಸರ್ಕಾರದಿಂದ ಆರ್ಥಿಕ ಸಹಾಯಧನ ಒದಗಿಸಬೇಕು ಎಂದು ಆಗ್ರಹಿಸಿದರು.

ರಾಜ್ಯದ ಎಲ್ಲಾ ಪಾರಂಪರಿಕ ವೈದ್ಯರ ಪರವಾಗಿ ಈ ಮನವಿಯನ್ನು ನವದೆಹಲಿಯ ಸೌತ್ ಬ್ಲಾಕ್‌ನಲ್ಲಿರುವ ಪ್ರಧಾನಮಂತ್ರಿಗಳ ಕಾರ್ಯಾಲಯಕ್ಕೆ ರವಾನಿಸಲಾಗಿದೆ. ಸರ್ಕಾರ ಹಾಗೂ ಆಯುಷ್ ಇಲಾಖೆಯು ಶೀಘ್ರವೇ ಈ ಬಗ್ಗೆ ಸಕಾರಾತ್ಮಕ ಸ್ಪಂದನೆ ನೀಡಲಿದ್ದು, ನಮ್ಮ ನೆಲದ ಮೂಲ ವೈದ್ಯ ಪದ್ಧತಿಗೆ ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಮನ್ನಣೆ ಸಿಗಲಿದೆ ಎಂಬ ವಿಶ್ವಾಸವನ್ನು ನಾಟಿ ವೈದ್ಯರು ವ್ಯಕ್ತಪಡಿಸಿದ್ದಾರೆ. ಪತ್ರ ಚಳವಳಿಯಲ್ಲಿ ವಿ.ಸಣ್ಣ ಅಜ್ಜಯ್ಯ, ಹಗರಿಬೊಮ್ಮನಹಳ್ಳಿ ರಾಜಭಕ್ಷಿ, ಕೆ.ಕಲ್ಲಹಳ್ಳಿ ಗೋಣಿಬಸಪ್ಪ, ಮೈಲಾರಪ್ಪ, ಚಿಗಟೇರಿ ಆನಂದಪ್ಪ, ಮಹಮ್ಮದ ರಫೀಕ್, ಸುರೇಶ್ ಚಿಗಟೇರಿ, ಮಹ್ಮದ್, ಸಾಬ್, ಮಂಜುನಾಥ ಅರಸೀಕೆರೆ, ಕರಿಬಸಪ್ಪ, ಕೆ.ರವಿಕುಮಾರ, ಲಕ್ಷ್ಮಣ, ಬಸವನಗೌಡ, ಈರಮ್ಮ, ರಮೇಶ್, ಹೆಚ್.ನಾಗಪ್ಪ, ಕೆ.ಕೊಟ್ರಪ್ಪ ಇದ್ದರು.

 

 

Share

Leave a comment

Leave a Reply

Your email address will not be published. Required fields are marked *

Related Articles
Homeಆರೋಗ್ಯ

ಸ್ಟಾರ್ ಹೆಲ್ತ್ ಉಚಿತ ವೈದ್ಯಕೀಯ ಸಲಹೆ

ದಾವಣಗೆರೆ : ದೇಶದ ಪ್ರಮುಖ ಆರೋಗ್ಯ ವಿಮೆ ಸಂಸ್ಥೆಗಳಲ್ಲಿ ಒಂದಾಗಿರುವ ಸ್ಟಾರ್ ಹೆಲ್ತ್ ಅಂಡ್ ಅಲೈಡ್...

Homeಆರೋಗ್ಯ

ವಿಶೇಷಚೇತನ ಮಕ್ಕಳನ್ನು ಮುಖ್ಯವಾಹಿನಿಗೆ ತರುವುದು ನಮ್ಮೆಲ್ಲರ ಜವಾಬ್ದಾರಿ – ಇಒ ವೈ.ಎಚ್. ಚಂದ್ರಶೇಖರ

ಹರಪನಹಳ್ಳಿ : ವಿಶೇಷಚೇತನ ಮಕ್ಕಳನ್ನು ಸಮಾಜದ ಮುಖ್ಯವಾಹಿನಿಗೆ ತರುವುದು ಮತ್ತು ಅವರಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವುದು...

Homeಆರೋಗ್ಯ

ಒಂಟಿಹಾಳ್ ಗ್ರಾಮವನ್ನು ತಂಬಾಕು ಮುಕ್ತ ಗ್ರಾಮವೆಂದು ಘೋಷಣೆ : 

ದಾವಣಗೆರೆ : ಯುವಕರು ಯಾವುದೇ ದುಶ್ಚಟ ಒಳಗಾಗದೆ ಇಂತಹ ಕಾರ್ಯಕ್ರಮಕ್ಕೆ ಕೈಜೋಡಿಸಿದರೆ ಪ್ರತಿ ಗ್ರಾಮವನ್ನು ಸಹ...

Homeಆರೋಗ್ಯ

ಪೋಷಕತ್ವ ಯೋಜನೆ ಅರ್ಜಿ ಆಹ್ವಾನ

ವಿಜಯನಗರ (ಹೊಸಪೇಟೆ) : 2026-27ನೇ ಸಾಲಿಗೆ ಮಕ್ಕಳ ಪಾಲನೆ ಮತ್ತು ರಕ್ಷಣೆ ಅನ್ವಯ, ಜಿಲ್ಲೆಯ ವಿವಿಧ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.