ಹರಪನಹಳ್ಳಿ : ಪ್ರಾಥಮಿಕ ಶಾಲಾ ಹಂತದಲ್ಲಿ ಸಮಗ್ರ ಶಿಕ್ಷಣ, ಪ್ರಧಾನಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಯೋಜನೆ ಪ್ರಚುರಪಡಿಸಲಾಗುತ್ತಿದೆ ಎಂದು ಸಾಮಾಜಿಕ ಪರಿಶೋಧನೆ ವ್ಯವಸ್ಥಾಪಕ ಹೆಚ್.ಕೊಟ್ರೇಶ್ ಅಭಿಪ್ರಾಯಪಟ್ಟರು.
ತಾಲ್ಲೂಕಿನ ಅರಸೀಕೆರೆ ಗ್ರಾಮದ ಜಿ.ವಿ.ವಿ.ಡಿ.ಎಸ್. ಪ್ರೌಢಶಾಲೆಯಲ್ಲಿ ಸಾಮಾಜಿಕ ಪರಿಶೋಧನ ನಿರ್ದೇಶನಾಲಯ ಬೆಂಗಳೂರು 2025-26 ನೇ ಸಾಲಿನ ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಮತ್ತು ಕ್ಷೀರಭಾಗ್ಯ ಯೋಜನೆಗಳ ಸಾಮಾಜಿಕ ಪರಿಶೋಧನ, ಶಾಲಾ ಸಭೆ, ಪೋಷಕರ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ನ.20 ರಿಂದ ನ.24ರ ವರೆಗೆ ಶಾಲಾ ಹಂತದಲ್ಲಿ ಆಯೋಜಿಸಲಾಗಿತ್ತು. ಯೋಜನೆಗಳ ಬಗ್ಗೆ ಪಾರದರ್ಶಕತೆ ಬಗ್ಗೆ ತಿಳಿಸಿಕೊಡಲಾಗಿದೆ. ಮಕ್ಕಳಿಂದ ಪಾಲಕ, ಪೋಷಕರಿಗೂ ಅರಿವು ಮೂಡಿಸಲಾಗಿದೆ ಎಂದರು. ಹರಪನಹಳ್ಳಿ ತಾಲ್ಲೂಕಿನ ಜಿವಿವಿಡಿಎಸ್ ಪ್ರೌಢಶಾಲೆ, ಕಮ್ಮತ್ತಹಳ್ಳಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ದುಗ್ಗಾವತಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಹಾರಕನಾಳು ಸಣ್ಣ ತಾಂಡ ಕಿರಿಯ ಪ್ರಾಥಮಿಕ ಶಾಲೆಗಳು ಆಯ್ಕೆಯಾಗಿವೆ. ಮದ್ಯಾಹ್ನದ ಬಿಸಿಯೂಟ ಹಾಜರಾತಿ ಹೆಚ್ಚಳ ಮಾಡುವುದು. ಮೊಟ್ಟೆ, ಬಾಳೆಹಣ್ಣು, ರಾಗಿಮಾಲ್ಟ್ ನೀಡಲಾಗುತ್ತದೆ ಎಂದು ತಿಳಿಸಿದರು. ಮುಖ್ಯಶಿಕ್ಷಕಿ ಕೆ.ಶಾಂತಕುಮಾರಿ ಅಧ್ಯಕ್ಷತೆ ವಹಿಸಿದ್ದರು. ವಿ.ಎಸ್.ಎಸ್.ಎನ್. ಅಧ್ಯಕ್ಷ ಇಟ್ಟಿಗಿಹಳ್ಳಿ ಬಸವರಾಜ್, ಮಲ್ಲಿಕಾರ್ಜುನ್, ಚಿದಾನಂದ ಗೌಡ, ಶಿಕ್ಷಕ ಸಣ್ಣ ಸಿದ್ರಾಮಯ್ಯ, ರಘು, ರೇಖಾ, ರಾಜೇಶ್ವರಿ, ಕಾವೇರಿ, ಮಂಜುಳಾ ಇದ್ದರು.
Leave a comment