Home ಸುದ್ದಿಗಳು ವೈದ್ಯನ ಅನುಚಿತ ವರ್ತನೆ ಖಂಡಿಸಿ ಪ್ರತಿಭಟನೆ
ಸುದ್ದಿಗಳು

ವೈದ್ಯನ ಅನುಚಿತ ವರ್ತನೆ ಖಂಡಿಸಿ ಪ್ರತಿಭಟನೆ

Share
ವೈದ್ಯನ ಅನುಚಿತ ವರ್ತನೆ ಖಂಡಿಸಿ ಪ್ರತಿಭಟನೆ
Share

 ಹರಪನಹಳ್ಳಿ : ಇಲ್ಲಿಯ ಸಾರ್ವಜನಿಕ ಆಸ್ಪತ್ರೆಗೆ ಬರುವ ರೋಗಿಗಳ ಜೊತೆ ಅನುಚಿತವಾಗಿ ವರ್ತಿಸುತ್ತಿರುವ ದಂತ ವೈದ್ಯನನ್ನು ಅಮಾನತು ಮಾಡಬೇಕು ಎಂದು ಒತ್ತಾಯಿಸಿ ಶೃಂಗಾರತೋಟ ಗ್ರಾಮಸ್ಥರು ಬುಧವಾರ ಪ್ರತಿಭಟನೆ ನಡೆಸಿದರು.

ಬೆಳಿಗ್ಗೆ ಗ್ರಾಮದ ಮಹಿಳೆಯೊಬ್ಬರು ವೈದ್ಯರ ಬಳಿ ತಮ್ಮ ಬಾಲಕಿಯನ್ನು ತಪಾಸಣೆಗೆ ಕರೆದುಕೊಂಡು  ಹೋಗಿದ್ದಾಗ ಅನುಚಿತವಾಗಿ ವರ್ತಿಸಿದ್ದಾರೆ. ಇದನ್ನು ಪ್ರಶ್ನಿಸಿದ ಅವರ ಮನೆಯವರ ಮೇಲೆ ಹಲ್ಲೆ ಯತ್ನ ಮಾಡಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ವೈದ್ಯ ನಾಗರಾಜ ನಾಯ್ಕ ಅವರು ಹಲವು ವರ್ಷದ ಹಿಂದೆ ಕೆಲಸ ಮಾಡಿದ್ದರು. ಈ ಹಿಂದೆ ಇದೇ ರೀತಿ ಅನುಚಿತವಾಗಿ ವರ್ತಿಸಿದ್ದರಿಂದ ಅಮಾನತುಗೊಂಡು ಹಡಗಲಿಗೆ ವರ್ಗಾವಣೆ ಯಾಗಿದ್ದರು. ಈಗಲೂ ಅದೇ ರೀತಿ ವರ್ತಿಸುತ್ತಿದ್ದು, ಆಸ್ಪತ್ರೆಗೆ ಬರುವ ರೋಗಿಗಳು ರೋಸಿ ಹೋಗಿದ್ದಾರೆ. ಇಂತಹ ವೈದ್ಯರನ್ನು ಅಮಾನತು ಮಾಡಿ, ತನಿಖೆ ಮಾಡಬೇಕು ಎಂದು ಗ್ರಾಮದ ಅಶೋಕ, ಮರಿಯಪ್ಪ ಅವರು ಒತ್ತಾಯಿಸಿದರು. ಮುಖಂಡರಾದ ಆಲೂರು ಶ್ರೀನಿವಾಸ, ಗಿರೀಶ, ಭರಮಪ್ಪ, ಮಂಜುನಾಥ, ಟಿ.ಉಚ್ಚಂಗೆಪ್ಪ, ಎಚ್.ನಾಗಪ್ಪ, ದುರುಗಪ್ಪ, ರಮೇಶ, ಸುರೇಶ ಇತರರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರಸ್ತೆ ನಿರ್ಮಾಣಕ್ಕೆ ಜಾಗ ತ್ಯಾಗ ಮಾಡಿದ ಗ್ರಾಮಸ್ಥರ ಋಣ ತೀರಿಸಲಾಗದು: ಶಾಸಕ ಹೆಚ್.ಆರ್. ಗವಿಯಪ್ಪ

ವಿಜಯನಗರ (ಹೊಸಪೇಟೆ) : ಊರಿನ ಸಾರ್ವಜನಿಕ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ತಮ್ಮ ಜಾಗ...

Homeಸುದ್ದಿಗಳು

ಕೊಪ್ಪಳ : ಪ್ರತಿಭಾ ಪುರಸ್ಕಾರಕ್ಕೆ ಬನ್ನಿ

ಹರಪನಹಳ್ಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹರಪನಹಳ್ಳಿ ತಾಲೂಕು ಘಟಕದ ವತಿಯಿಂದ 2026-27ನೇ ಸಾಲಿನ...

Homeಸುದ್ದಿಗಳು

ಜಿಲ್ಲೆಯ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಶೇ.100 ಇ-ಫಾರ್ಮ್ ವಿತರಣೆ ಪೂರ್ಣ

ವಿಜಯನಗರ (ಹೊಸಪೇಟೆ)  : ಜಿಲ್ಲೆಯ ಐದು ತಾಲೂಕಿನಿಂದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ...

Homeಸುದ್ದಿಗಳು

ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸದಸ್ಯರ ಆಯ್ಕೆಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : 2026ನೇ ಸಾಲಿಗೆ ಜಿಲ್ಲೆಯಲ್ಲಿ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟು ಜಿಲ್ಲಾ ಮಟ್ಟದ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.