Home ಸುದ್ದಿಗಳು ಕಳಪೆ ಕಿಟ್ ವಿತರಣೆ ಆರೋಪ : ಪ್ರತಿಭಟನೆ
ಸುದ್ದಿಗಳು

ಕಳಪೆ ಕಿಟ್ ವಿತರಣೆ ಆರೋಪ : ಪ್ರತಿಭಟನೆ

Share
Share

ಹರಪನಹಳ್ಳಿ : ಕಳಪೆ ಕಾರ್ಮಿಕ‌ ಕಿಟ್ ವಿತರಿಸಲಾಗಿದೆ ಎಂದು ಆರೋಪಿಸಿ ಕರ್ನಾಟಕ ಪ್ರಗತಿಪರ ಕಟ್ಟಡ ಕಾರ್ಮಿಕರ ಪದಾಧಿಕಾರಿಗಳು ಸಾಮಾಗ್ರಿ ಸುಟ್ಟು ಹಾಕಿ ಸೋಮವಾರ ಪ್ರತಿಭಟನೆ ನಡೆಸಿದರು.

ಡಾ.ಬಿ.ಆರ್.ಅಂಬೇಡ್ಕರ ವೃತ್ತದಲ್ಲಿ ಜಮಾಯಿಸಿದ ಕಾರ್ಮಿಕರು ಹೆಲ್ಮೆಟ್, ಕೈಗವಸು, ಸೆಪ್ಟಿ ಜಾಕೆಟ್, ಸುರಕ್ಷಾ ಕವಚ, ಬ್ಯಾಗ್ ಗಳನ್ನು ಸುಟ್ಟು ಹಾಕಿ ಆಕ್ರೋಶ ವ್ಯಕ್ತಪಡಿಸಿ, ಉಪವಿಭಾಗಾಧಿಕಾರಿ ಸುರೇಶ್ ಕುಮಾರ ಅವರಿಗೆ ಮನವಿ ಸಲ್ಲಿಸಿದರು.ಜಿಲ್ಲಾ ಕಾರ್ಯದರ್ಶಿ ಸಂತೋಷ‌ ಗುಳೇದಹಟ್ಟಿ ಮಾತನಾಡಿ, ಕಾರ್ಮಿಕ ಇಲಾಖೆಯಡಿ ನೊಂದಾಯಿತ ಕಾರ್ಮಿಕರಿಗೆ ಕಳಪೆ ಗುಣಮಟ್ಟದ ಸಾಮಾಗ್ರಿ ವಿತರಿಸಿದ್ದಾರೆ. ವಿತರಣೆ ಮಾಡುವಾಗಲೂ ತಾರತಮ್ಯ ನೀತಿ ಅನುಸರಿಸಲಾಗಿದೆ ಎಂದು ದೂರಿದರು.

ರಾಜ್ಯಾಧ್ಯಂತ ಕಳಪೆ‌ ಕಿಟ್ ವಿತರಣೆಯಲ್ಲಿ ಆಗಿರುವ ಅವ್ಯವಹಾರ ತನಿಖೆ‌ ಮಾಡಬೇಕು ಎಂದು ಆಗ್ರಹಿಸಿದರು. ಕಾರ್ಮಿಕ‌ ನಿರೀಕ್ಷಕ ಪ್ರಕಾಶ್ ಗೌಡರ್ ಅವರೂ ಮನವಿ ಸ್ವೀಕರಿಸಿದರು. ಮುಖಂಡರಾದ ಸಂದೇರ ಪರಶುರಾಮ್, ರೆಹಮಾನ್, ರಾಮಪ್ಪ, ಖಲೀಂವುಲ್ಲಾ, ಬಾಲಚಂದ್ರ, ಗೋಣೇಶ, ಎಂ.ಕುಮಾರ ಇದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರಸ್ತೆ ನಿರ್ಮಾಣಕ್ಕೆ ಜಾಗ ತ್ಯಾಗ ಮಾಡಿದ ಗ್ರಾಮಸ್ಥರ ಋಣ ತೀರಿಸಲಾಗದು: ಶಾಸಕ ಹೆಚ್.ಆರ್. ಗವಿಯಪ್ಪ

ವಿಜಯನಗರ (ಹೊಸಪೇಟೆ) : ಊರಿನ ಸಾರ್ವಜನಿಕ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ತಮ್ಮ ಜಾಗ...

Homeಸುದ್ದಿಗಳು

ಕೊಪ್ಪಳ : ಪ್ರತಿಭಾ ಪುರಸ್ಕಾರಕ್ಕೆ ಬನ್ನಿ

ಹರಪನಹಳ್ಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹರಪನಹಳ್ಳಿ ತಾಲೂಕು ಘಟಕದ ವತಿಯಿಂದ 2026-27ನೇ ಸಾಲಿನ...

Homeಸುದ್ದಿಗಳು

ಜಿಲ್ಲೆಯ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಶೇ.100 ಇ-ಫಾರ್ಮ್ ವಿತರಣೆ ಪೂರ್ಣ

ವಿಜಯನಗರ (ಹೊಸಪೇಟೆ)  : ಜಿಲ್ಲೆಯ ಐದು ತಾಲೂಕಿನಿಂದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ...

Homeಸುದ್ದಿಗಳು

ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸದಸ್ಯರ ಆಯ್ಕೆಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : 2026ನೇ ಸಾಲಿಗೆ ಜಿಲ್ಲೆಯಲ್ಲಿ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟು ಜಿಲ್ಲಾ ಮಟ್ಟದ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.