ವಿಜಯನಗರ(ಹೊಸಪೇಟೆ): ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರು ಹಾಗೂ ಮಾಜಿ ಸಚಿವ ಪಿ.ಟಿ. ಪರಮೇಶ್ವರ ನಾಯ್ಕ್ ಅವರು ಜುಲೈ 21 ರಿಂದ ಜುಲೈ 25 ರವರೆಗೆ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಪಿ.ಟಿ.ಪರಮೇಶ್ವರ್ ನಾಯ್ಕ್ ಅವರು ಇಂದು ಸಂಜೆ 6 ಗಂಟೆಗೆ ಹರಪನಹಳ್ಳಿ ತಾಲ್ಲೂಕಿನ ಲಕ್ಷಿಪುರ ಗ್ರಾಮದ ತುಳಜಾಭವಾನಿ ದೇವಸ್ಥಾನಕ್ಕೆ ಭೇಟಿ ನೀಡುವರು.
ಸಂಜೆ 7.30ಕ್ಕೆ ಹರಪನಹಳ್ಳಿ ತಾಲ್ಲೂಕಿನ ಗೃಹಲಕ್ಷಿ ಫಲಾನುಭವಿಗಳೊಂದಿಗೆ ಚರ್ಚೆ ನಡೆಸಿ ಹರಪನಹಳ್ಳಿಯಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ಜುಲೈ 22 ರಂದು ಬೆಳಗ್ಗೆ 11 ಗಂಟೆಗೆ ಗ್ಯಾರಂಟಿ ಯೋಜನೆಗಳ ಅಧಿಕಾರಿಗಳೊಂದಿಗೆ ಚರ್ಚೆ ಹಾಗೂ ಸಾರ್ವಜನಿಕರ ಬೇಟಿ ನಂತರ ಹರಪನಹಳ್ಳಿಯಲ್ಲಿಯೇ ತಂಗುವರು.
ಜುಲೈ 23 ರಂದು 10.30ಕ್ಕೆ ಹಡಗಲಿ ತಾಲ್ಲೂಕಿಗೆ ಗ್ಯಾರಂಟಿ ಯೋಜನೆಗಳ ಅಧಿಕಾರಿಗಳೊಂದಿಗೆ ಚರ್ಚೆ ಹಾಗೂ ಸಾರ್ವಜನಿಕರ ಬೇಟಿ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಗ್ಯಾರಂಟಿ ಸಮಿತಿ ಅಧ್ಯಕ್ಷರು, ಉಪಾದ್ಯಕ್ಷರೊಂದಿಗೆ ಸೆಭೆ ನಡೆಸಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ, ಪ್ರಗತಿ ಪರಿಶೀಲನೆ, ಸಾರ್ವಜನಿಕ ಭೇಟಿ ಹಾಗೂ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳೊಂದಿಗೆ ನೇರ ಸಂವಾದ ನಡೆಸಿದ ಅವರು ಹರಪನಹಳ್ಳಿಯಲ್ಲಿ ವಾಸ್ತವ್ಯ ಹೂಡುವರು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
Leave a comment