Home ಮತದಾರರ ಋಣ‌‌ ತೀರಿಸುವೆ : ಎಂ.ಪಿ.ಲತಾ ಮಲ್ಲಿಕಾರ್ಜುನ
Homeಸುದ್ದಿಗಳು

ಮತದಾರರ ಋಣ‌‌ ತೀರಿಸುವೆ : ಎಂ.ಪಿ.ಲತಾ ಮಲ್ಲಿಕಾರ್ಜುನ

Share
ಮತದಾರರ ಋಣ‌‌ ತೀರಿಸುವೆ : ಎಂ.ಪಿ.ಲತಾ ಮಲ್ಲಿಕಾರ್ಜುನ
Share

ಹರಪನಹಳ್ಳಿ :   ಶಾಸಕಿಯಾಗಿ ಆಯ್ಕೆ ಮಾಡಿದ ಕ್ಷೇತ್ರದ‌ ಮತದಾರರ ಋಣ ತೀರಿಸಲು ಕ್ಷೇತ್ರದಲ್ಲಿ ಅಭಿವೃದ್ದಿ ಕೆಲಸ ಮಾಡುತ್ತಿದ್ದೇನೆ ಎಂದು ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ ತಿಳಿಸಿದರು.

ತಾಲ್ಲೂಕಿನ ಮೈದೂರು ಗ್ರಾಮದಲ್ಲಿ ಭಾನುವಾರ ರಸ್ತೆಗೆ ಭೂಮಿ ಪೂಜೆ ನೆರವೇರಿಸಿದ ಅವರು ಮಾತನಾಡಿದರು.ಚಿಗಟೇರಿ ಹೋಬಳಿ ನಮ್ಮ ಕುಟುಂಬಕ್ಕೆ ತವರು ಮನೆ ಇದ್ದಂತಿದೆ.  ಈ ಭಾಗದ ಜನರ ಜೊತೆ 1975ರಿಂದ ಒಡನಾಟವಿದೆ ಎಂದು ಹೇಳಿದರು. ಹಡಗಲಿಯಿಂದ ನಮ್ಮ‌ತಂದೆ ಎಂ.ಪಿ.ಪ್ರಕಾಶ್ ಸ್ಪರ್ಧಿಸಿದಾಗ, ಚಿಗಟೇರಿ ಹೋಬಳಿ ಮತದಾರರು ಗೆಲ್ಲಿಸಿ ಕಳಿಸುತ್ತಿದ್ದರು. ಅಂದು ಅಪ್ಪಾಜಿ ಅವರ‌‌ ಮೇಲೆ ಜನರು ಇಟ್ಟಿದ್ದ ಪ್ರೀತಿ ವಿಶ್ಚಾಸವೇ ನನ್ನ ಗೆಲುವಿಗೆ ಶ್ರೀರಕ್ಷೆ ಆಗಿದೆ ಎಂದರು.

ನನ್ನ ಸಹೋದರ ಎಂ‌ಪಿ.ರವೀಂದ್ರ ಅಂದಾಜು 3 ಸಾವಿರ ಕೋಟಿ ತಂದು ಕೆಲಸ ಮಾಡಿದ್ದರು.‌ 371ಜೆ ಸೌಲಭ್ಯ ಕಲ್ಪಿಸಿದ ಪ್ರತಿಫಲವಾಗಿ ಇಂದು‌ ಹೆಚ್ಚಿನ ಅನುದಾನ‌ ಸಿಗುತ್ತಿದೆ‌ ಎಂದು ತಿಳಿಸಿದರು.

₹ 80 ಲಕ್ಷ ವೆಚ್ಚದಲ್ಲಿ ಕಂಚಿಕೇರಿ ಗ್ರಾಮದಿಂದ ಚೌಡಾಪುರ‌‌ ಕ್ರಾಸ್ ವರೆಗೆ ರಸ್ತೆ, ₹ 1.50 ಕೋಟಿ ವೆಚ್ಚದಲ್ಲಿ ಮತ್ತೂರು ಮಾರ್ಗದಿಂದ ಜಿಲ್ಲಾ ರಸ್ತೆಗೆ ಸಂಪರ್ಕ‌ ಕಲ್ಪಿಸುವ ರಸ್ತೆ, ₹ 3.50 ಕೋಟಿ ವೆಚ್ಚದಲ್ಲಿ ಮೈದೂರಿನಿಂದ ಗೌರಿಪುರಕ್ಕೆ ರಸ್ತೆ, ₹ 1.20 ಕೋಟಿ ವೆಚ್ಚದಲ್ಲಿ ಮೈದೂರಿನಿಂದ ತಾಲ್ಲೂಕು ಗಡಿವರೆಗಿನ ರಸ್ತೆ‌  ನಿರ್ಮಿಸಲು ಭೂಮಿ ಪೂಜೆ ನೆರವೇರಿಸಿದರು. ಎಇಇ ಕುಬೇಂದ್ರನಾಯ್ಕ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರೋಗನಿರೋಧಕ ಶಕ್ತಿ ಹೆಚ್ಚಿಸಲು ತಾಯಿಯ ಎದೆಹಾಲು ಅತ್ಯಗತ್ಯ: ಡಿಹೆಚ್‌ಒ ಡಾ.ಟಿ.ಲಿಂಗರಾಜು

ವಿಜಯನಗರ (ಹೊಸಪೇಟೆ) : ಸ್ತನ್ಯಪಾನ ಮಾಡುವುದು ತಾಯಿ ಹಾಗೂ ಮಗುವಿನ ಆರೋಗ್ಯದ ದೃಷ್ಟಿಯಿಂದ ಅತ್ಯಂತ ಬಹುಮುಖ್ಯವಾಗಿದೆ....

Homeಸುದ್ದಿಗಳು

ಸಂಪುಟ ವಿಸ್ತರಣೆ ಕೌತುಕಕ್ಕೆ ಇಂದು ತೆರೆ: ಸಂಜೆ ರಾಜಭವನದಲ್ಲಿ 20 ನೂತನ ಸಚಿವರ ಪದಗ್ರಹಣ

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಸಚಿವ ಸಂಪುಟ ವಿಸ್ತರಣೆ ಕಸರತ್ತಿಗೆ ಕೊನೆಗೂ...

Homeಶಿಕ್ಷಣ

ಬಿ.ಐ.ಇ.ಟಿ. ಯಲ್ಲಿ ನೈಲಿಟ್‌ನ 90 ಗಂಟೆಗಳ ‘ಚಿಪ್‌ಕ್ರಾಫ್ಟ್’ ಸೆಮಿಕಂಡಕ್ಟರ್ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ

ದಾವಣಗೆರೆ : ಬಾಪೂಜಿ ಇಂಜಿನಿಯರಿಂಗ್  ಮತ್ತು ತಾಂತ್ರಿಕ ಮಹಾವಿದ್ಯಾಲಯ ಸಂಸ್ಥೆಯ ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ಇಂಜಿನಿಯರಿಂಗ್...

Homeಸುದ್ದಿಗಳು

ನರೇಗಾ ಮಾದರಿ ಕಾಮಗಾರಿ ಮರುಸ್ಥಾಪನೆಗೆ ಆಗ್ರಹ

ಹರಪನಹಳ್ಳಿ : ಹೊಸದಾಗಿ ಜಾರಿಗೆ ತಂದಿರುವ ವಿಬಿಜಿ ರಾಮ್‍ಜಿ ಕಾಯ್ದೆಯಡಿ ಹಳೆಯ ನರೇಗಾ ಮಾದರಿ ಕಾಮಗಾರಿಗಳನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸಿ ಗ್ರಾಮೀಣ ಕೂಲಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.