Home ಸುದ್ದಿಗಳು ಹೊಸಕೋಟೆ ಗ್ರಾಮ ಪಂಚಾಯ್ತಿಯಲ್ಲಿ ಗಣರಾಜ್ಯೋತ್ಸವ
ಸುದ್ದಿಗಳು

ಹೊಸಕೋಟೆ ಗ್ರಾಮ ಪಂಚಾಯ್ತಿಯಲ್ಲಿ ಗಣರಾಜ್ಯೋತ್ಸವ

Share
ಹೊಸಕೋಟೆ ಗ್ರಾಮ ಪಂಚಾಯ್ತಿಯಲ್ಲಿ ಗಣರಾಜ್ಯೋತ್ಸವ
Share

ಹರಪನಹಳ್ಳಿ: ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವನ್ನು ರಚಿಸಿ ಜಾರಿಗೆತಂದ ಈ ಸುಂದರ ದಿನವನ್ನ ನಾವೆಲ್ಲ ಗಣರಾಜ್ಯೋತ್ಸವ ದಿನವನ್ನಾಗಿ ಸಂಭ್ರಮದಿಂದ ಆಚರಿಸುತ್ತೇವೆ’ ಎಂದು ಹೊಸಕೋಟೆ ಗ್ರಾ.ಪಂ.ಅಧ್ಯಕ್ಷ ಕಬ್ಬಳ್ಳಿ ಡಿ.ನಾಗಪ್ಪ ಹೇಳಿದರು.

ತಾಲೂಕಿನ ಹೊಸಕೋಟೆ ಗ್ರಾಮ ಪಂಚಾಯತಿ ಆವರಣದಲ್ಲಿ ಆಯೋಜಿಸಲಾಗಿದ್ದ 77ನೇ ಗಣರಾಜ್ಯೋತ್ಸವದ ಸಂಭ್ರಮದಲ್ಲಿ ರಾಷ್ಟ ಧ್ವಜಾರೋಹಣವನ್ನು ನೆರವೇರಿಸಿ ಅವರು ಮಾತನಾಡಿದರು.ಸರ್ಕಾರದ ಮೂಲ ಧ್ಯೇಯ ಸಮಾನತೆ ಮತ್ತು ಸಾಮಾಜಿಕ ನ್ಯಾಯವಾಗಿದೆ.ರಾಜ್ಯ ಸರ್ಕಾರವು ಭವ್ಯ ಸಂವಿಧಾನದ ಆಶಯಗಳನ್ನು ಗಟ್ಟಿಗೊಳಿಸುವುದು ನಮ್ಮೆಲರ ಜವಾಬ್ದಾರಿ ಎಂದು  ತಿಳಿಸಿದರು.

ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹೇಮಂತ್ ಕುಮಾರ್ ಮಾತನಾಡಿ, ನಮ್ಮ ದೇಶವನ್ನ ಅಭಿವೃದ್ಧಿ ಪಥದಲ್ಲಿ ಮುನ್ನೆಡೆಸುವುದು ಪ್ರತಿಯೊಬ್ಬ ಭಾರತೀಯ ಕರ್ತವ್ಯ ಎಂದು  ತಿಳಿಸಿದರು.  ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಕವಿತಮ್ಮ ವಿರೇಶ್,ಬೂದಿಹಾಳ್ ಸಿದ್ದೇಶ್,ಬಸಮ್ಮ ಲೋಕಪ್ಪ,ಗೌರಮ್ಮ ಜಗದೀಶ್,ಹೊಸಕೋಟೆ ಬಿ.ಮಂಜಮ್ಮ ಆನಂದಪ್ಪ,ಜಯಮ್ಮ ಕೃಷ್ಣಪ್ಪ, ವಡ್ಡನಹಳ್ಳಿ ಕೆಂಚಪ್ಪ,ಮುಖಂಡರಾದ ಗುಡಿಹಳ್ಳಿ ವಿರೇಶ್,ಕೋಣನಕಟ್ಟೆ ಅಣ್ಣಪ್ಪ,ಕಾರ್ಯದರ್ಶಿ ರೇವಣ್ಣ,ಚನ್ನಬಸಪ್ಪ,ಹೊಸಕೋಟೆ ಸರ್ಕಾರಿ ಶಾಲೆಯ ಶಿಕ್ಷಕರಾದ ಕರಿಬಸಯ್ಯ,ಹರೀಶ್,ಶರಣಪ್ಪ,ನಾಗಪ್ಪ,ಅನಿತಾ ಸೇರಿದಂತ್ತೆ ಶಾಲೆಯ ಮಕ್ಕಳು ಮತ್ತು ಗ್ರಾಮಸ್ಥರು ಸೇರಿ ಸಿಬ್ಬಂದಿಗಳು ಇದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಹರಪನಹಳ್ಳಿ : ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ 

ಪ್ರಜಾಸೇವ ಆಂದೋಲನ ಜನರ ಹೃದಯಕ್ಕೆ ಮುಟ್ಟುವಂತಿರಲಿ ಹರಪನಹಳ್ಳಿ :  ಹಿಂದೆ ತಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯುವ ಭರವಸೆಯಿಲ್ಲದೆ...

Homeಸುದ್ದಿಗಳು

ಬಾಲಕನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ 

ಹೊಸಪೇಟೆ (ವಿಜಯನಗರ ಜಿಲ್ಲೆ ) : ಏಳು ವರ್ಷದ ಬಾಲಕನನ್ನು ಅಪಹರಿಸಿ ಕಾಲುವೆಗೆ ಎಸೆದು ಕೊಲೆ...

Homeಸುದ್ದಿಗಳು

ಜೆಡಿಎಸ್ ಅಧ್ಯಕ್ಷರಾಗಿ ವಿ. ಮಲ್ಕಪ್ಪ ಆಯ್ಕೆ

ಹರಪನಹಳ್ಳಿ : ತಾಲ್ಲೂಕು ಜಾತ್ಯಾತೀತ ಜನತಾದಳದ (ಜೆಡಿಎಸ್) ನೂತನ ಅಧ್ಯಕ್ಷರಾಗಿ ತಾವರೆಗೊಂದಿ ಗ್ರಾಮದ ವಿ. ಮಲ್ಕಪ್ಪ...

Homeಸುದ್ದಿಗಳು

ಮಕ್ಕಳಿಗೆ ವಿದ್ಯೆಯೊಂದಿಗೆ ಉತ್ತಮ ಸಂಸ್ಕಾರ ನೀಡುವ ಹೊಣೆ ಎಲ್ಲರದ್ದು: ಪ್ರಾಂಶುಪಾಲ ಡಾ. ಎಂ. ಸುರೇಶ್

ಹರಪನಹಳ್ಳಿ : 'ಇಂದಿನ ಮಕ್ಕಳಿಗೆ ವಿದ್ಯೆಯ ಜೊತೆಗೆ ಉತ್ತಮ ಸಂಸ್ಕಾರವನ್ನು ನೀಡುವ ಹೊಣೆಯನ್ನು ಪ್ರತಿಯೊಬ್ಬರೂ ಹೊರಬೇಕು'...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.