Home ಸುದ್ದಿಗಳು ಮರಳು ಬ್ಲಾಕ್‍ ಟೆಂಡರ್ ಪ್ರಕ್ರಿಯೆಗೆ ನ್ಯಾಯಾಲಯ ತಡೆ?
ಸುದ್ದಿಗಳು

ಮರಳು ಬ್ಲಾಕ್‍ ಟೆಂಡರ್ ಪ್ರಕ್ರಿಯೆಗೆ ನ್ಯಾಯಾಲಯ ತಡೆ?

Share
Share

ವಿಜಯನಗರ (ಹೊಸಪೇಟೆ): ಜಿಲ್ಲೆಯ ತುಂಗಭದ್ರಾ ನದಿಪಾತ್ರ, ಹಳ್ಳ, ನದಿಗಳ ಪಾತ್ರದಲ್ಲಿ ಲಭ್ಯವಿರುವ ಹಡಗಲಿ, ಹರಪನಹಳ್ಳಿ ತಾಲ್ಲೂಕಿನ 8 ಮರಳು ಬ್ಲಾಕ್‍ಗಳಿಗೆ ಕರೆದಿದ್ದ ಇ-ಟೆಂಡರ್ ಗೆ ಧಾರವಾಡ ಹೈಕೋರ್ಟ್‍ ಪೀಠ ಟೆಂಡರ್ ಪ್ರಕ್ರಿಯೆಗೆ ತಡೆ ನೀಡಿ ಮಧ್ಯಂತರ ಆದೇಶ ಹೊರಡಿಸಿದೆ.

ಇ ಟೆಂಡರ್ ಮೂಲಕ ವಿಲೇವಾರಿಪಡಿಸಲು ಏಪ್ರಿಲ್ 5 ರಂದು ರಾಜ್ಯ ಸರ್ಕಾರ ರಾಜ್ಯಪತ್ರದ ಮೂಲಕ ಅಧಿಸೂಚನೆ ಜಾರಿಗೊಳಿಸಿತ್ತು. ಅದರನ್ವಯ ಗಣಿ, ಭೂ ವಿಜ್ಞಾನ ಇಲಾಖೆಯು ಆ.12ರಂದು ಪತ್ರಿಕಾ ಪ್ರಕಟಣೆ ಹೊರಡಿಸಿ,  ಹೂವಿನ ಹಡಗಲಿ ತಾಲ್ಲೂಕಿನ ಹರವಿ-203 (2 ಕೇಂದ್ರ), ಕೊಂಬಳಿ-294 (2), ಹಕ್ಕಂಡಿ-286, ಕಡತಿ 316, , ಹಿರೆಬನ್ನಿಮಟ್ಟಿ 296, ನಿಟ್ಟೂರು 113 ಬ್ಲಾಕ್‍ ಗಳಲ್ಲಿ ಆಯಾ ಪ್ರದೇಶಕ್ಕೆ ಅನುಗುಣವಾಗಿ ಎಕರೆವಾರು ನಿಗಧಿಪಡಿಸಿ ಅರ್ಜಿ ಕರೆದಿತ್ತು.

ಕೆಪಿಪಿಪಿ ಕಾಯ್ದೆ ಅನ್ವಯ ಟೆಂಡರ್ ಆಹ್ವಾನಿಸಿ 90 ದಿನದೊಳಗೆ ಅರ್ಜಿ ವಿಲೇವಾರಿ ಪಡಿಸಬೇಕಿತ್ತು. ಆದರೆ ಅವಧಿ ಪೂರ್ಣಗೊಂಡು ಅರ್ಜಿ ವಿಲೇಪಡಿಸದ ಸರ್ಕಾರದ ವಿಳಂಬ ನೀತಿ ಖಂಡಿಸಿ, ಕೆಲ ಅರ್ಜಿದಾರರು ನ್ಯಾಯಾಲಯದ ಮೊರೆ ಹೋಗಿದ್ದರು. ಅರ್ಜಿ ಪರಿಶೀಲಿಸಿರುವ ನ್ಯಾಯಪೀಠ, ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ನೊಟೀಸ್ ಜಾರಿಗೊಳಿಸಿ, ಇ ಟೆಂಡರ್ ಪ್ರಕ್ರಿಯೆ ಮುಂದುವರಿಸದಂತೆ ಮಧ್ಯಂತರ ಆದೇಶ ನೀಡಿದೆ ಎಂದು ಅರ್ಜಿದಾರ ಹೊಂಬಾಳೆ ರೇವಣ್ಣ ಮಾಹಿತಿ ನೀಡಿದ್ದಾರೆ. ನ್ಯಾಯಾಲದಲ್ಲಿ ದಾಖಲಾಗಿರುವ ಅರ್ಜಿ ಸಂಖ್ಯೆ WP/0108830/2025 ಆಗಿದ್ದು, ಮುಂದಿನ ವಾಯಿದೆ ಡಿಸೆಂಬರ್ 4 ರಂದು ಜರುಗಲಿದೆ.

Share

Leave a comment

Leave a Reply

Your email address will not be published. Required fields are marked *

Related Articles
Homeರಾಜಕೀಯಸುದ್ದಿಗಳು

ಅಡವಿಹಳ್ಳಿಯಲ್ಲಿ ಬಸವೇಶ್ವರ ದೇವಸ್ಥಾನದ ಕಳಸಾರೋಹಣ

ಹರಪನಹಳ್ಳಿ: ಮೊಬೈಲ್ಗೆ ಹೇಗೆ ನೆಟ್ವರ್ಕ್ ಟವರ್ ಮುಖ್ಯವೋ, ಹಾಗೆಯೇ ದೇವಸ್ಥಾನದ ಗೋಪುರಕ್ಕೆ ಕಳಸ ಬಹುಮುಖ್ಯ, ದೇವಸ್ಥಾನಗಳು...

Homeಸುದ್ದಿಗಳು

ಕೋಟೆ ಅಂಜನೇಯ ದೇವಸ್ಥಾನ ಜಾಗ ಒತ್ತುವರಿ ತೆರವುಗೊಳಿಸದಿದ್ದರೆ ಹೋರಾಟದ ಎಚ್ಚರಿಕೆ

ಹರಪನಹಳ್ಳಿ (ವಿಜಯನಗರ ಜಿಲ್ಲೆ ) : ಪಾಳೆಗಾರ ರಾಜಸೋಮಶೇಖರ ನಾಯಕರ ಕಾಲದ ನಿರ್ಮಾಣವಾದ ಕೋಟೆ ಅಂಜನೇಯ...

ssm dvg
ಸುದ್ದಿಗಳು

ಶಾಮನೂರು ಶಿವಶಂಕರಪ್ಪ ಜನ್ಮದಿನ: ಜೂನ್‌ 17ಕ್ಕೆ  ಉಚಿತ ಸಾಮೂಹಿಕ ವಿವಾಹ  

ಹರಪನಹಳ್ಳಿ : ಮಾಜಿ ಶಾಸಕ ದಿವಂಗತ ಶಾಮನೂರು ಶಿವಶಂಕರಪ್ಪ ಅವರ 96ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಜೂನ್...

vijaya vikrama
Homeಸುದ್ದಿಗಳು

ದೇಶದ ಬದಲಾವಣೆಯಲ್ಲಿ ಪತ್ರಕರ್ತರ ಪಾತ್ರ ದೊಡ್ಡದು : ಕೋಡಿಹಳ್ಳಿ ಭೀಮಪ್ಪ

ಹರಪನಹಳ್ಳಿ : ಪತ್ರಿಕೋದ್ಯಮದಲ್ಲಿ ನಿಷ್ಠೆ, ಧೈರ್ಯ ಮತ್ತು ಪ್ರಾಮಾಣಿಕತೆ ಇದ್ದರೆ ಸಮಾಜದ ದಿಕ್ಕು ಬದಲಾಯಿಸಲು ಸಾಧ್ಯವಾಗುತ್ತದೆ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.