Home ಸುದ್ದಿಗಳು ಮರಳು ಬ್ಲಾಕ್‍ ಟೆಂಡರ್ ಪ್ರಕ್ರಿಯೆಗೆ ನ್ಯಾಯಾಲಯ ತಡೆ?
ಸುದ್ದಿಗಳು

ಮರಳು ಬ್ಲಾಕ್‍ ಟೆಂಡರ್ ಪ್ರಕ್ರಿಯೆಗೆ ನ್ಯಾಯಾಲಯ ತಡೆ?

Share
Share

ವಿಜಯನಗರ (ಹೊಸಪೇಟೆ): ಜಿಲ್ಲೆಯ ತುಂಗಭದ್ರಾ ನದಿಪಾತ್ರ, ಹಳ್ಳ, ನದಿಗಳ ಪಾತ್ರದಲ್ಲಿ ಲಭ್ಯವಿರುವ ಹಡಗಲಿ, ಹರಪನಹಳ್ಳಿ ತಾಲ್ಲೂಕಿನ 8 ಮರಳು ಬ್ಲಾಕ್‍ಗಳಿಗೆ ಕರೆದಿದ್ದ ಇ-ಟೆಂಡರ್ ಗೆ ಧಾರವಾಡ ಹೈಕೋರ್ಟ್‍ ಪೀಠ ಟೆಂಡರ್ ಪ್ರಕ್ರಿಯೆಗೆ ತಡೆ ನೀಡಿ ಮಧ್ಯಂತರ ಆದೇಶ ಹೊರಡಿಸಿದೆ.

ಇ ಟೆಂಡರ್ ಮೂಲಕ ವಿಲೇವಾರಿಪಡಿಸಲು ಏಪ್ರಿಲ್ 5 ರಂದು ರಾಜ್ಯ ಸರ್ಕಾರ ರಾಜ್ಯಪತ್ರದ ಮೂಲಕ ಅಧಿಸೂಚನೆ ಜಾರಿಗೊಳಿಸಿತ್ತು. ಅದರನ್ವಯ ಗಣಿ, ಭೂ ವಿಜ್ಞಾನ ಇಲಾಖೆಯು ಆ.12ರಂದು ಪತ್ರಿಕಾ ಪ್ರಕಟಣೆ ಹೊರಡಿಸಿ,  ಹೂವಿನ ಹಡಗಲಿ ತಾಲ್ಲೂಕಿನ ಹರವಿ-203 (2 ಕೇಂದ್ರ), ಕೊಂಬಳಿ-294 (2), ಹಕ್ಕಂಡಿ-286, ಕಡತಿ 316, , ಹಿರೆಬನ್ನಿಮಟ್ಟಿ 296, ನಿಟ್ಟೂರು 113 ಬ್ಲಾಕ್‍ ಗಳಲ್ಲಿ ಆಯಾ ಪ್ರದೇಶಕ್ಕೆ ಅನುಗುಣವಾಗಿ ಎಕರೆವಾರು ನಿಗಧಿಪಡಿಸಿ ಅರ್ಜಿ ಕರೆದಿತ್ತು.

ಕೆಪಿಪಿಪಿ ಕಾಯ್ದೆ ಅನ್ವಯ ಟೆಂಡರ್ ಆಹ್ವಾನಿಸಿ 90 ದಿನದೊಳಗೆ ಅರ್ಜಿ ವಿಲೇವಾರಿ ಪಡಿಸಬೇಕಿತ್ತು. ಆದರೆ ಅವಧಿ ಪೂರ್ಣಗೊಂಡು ಅರ್ಜಿ ವಿಲೇಪಡಿಸದ ಸರ್ಕಾರದ ವಿಳಂಬ ನೀತಿ ಖಂಡಿಸಿ, ಕೆಲ ಅರ್ಜಿದಾರರು ನ್ಯಾಯಾಲಯದ ಮೊರೆ ಹೋಗಿದ್ದರು. ಅರ್ಜಿ ಪರಿಶೀಲಿಸಿರುವ ನ್ಯಾಯಪೀಠ, ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ನೊಟೀಸ್ ಜಾರಿಗೊಳಿಸಿ, ಇ ಟೆಂಡರ್ ಪ್ರಕ್ರಿಯೆ ಮುಂದುವರಿಸದಂತೆ ಮಧ್ಯಂತರ ಆದೇಶ ನೀಡಿದೆ ಎಂದು ಅರ್ಜಿದಾರ ಹೊಂಬಾಳೆ ರೇವಣ್ಣ ಮಾಹಿತಿ ನೀಡಿದ್ದಾರೆ. ನ್ಯಾಯಾಲದಲ್ಲಿ ದಾಖಲಾಗಿರುವ ಅರ್ಜಿ ಸಂಖ್ಯೆ WP/0108830/2025 ಆಗಿದ್ದು, ಮುಂದಿನ ವಾಯಿದೆ ಡಿಸೆಂಬರ್ 4 ರಂದು ಜರುಗಲಿದೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರಸ್ತೆ ನಿರ್ಮಾಣಕ್ಕೆ ಜಾಗ ತ್ಯಾಗ ಮಾಡಿದ ಗ್ರಾಮಸ್ಥರ ಋಣ ತೀರಿಸಲಾಗದು: ಶಾಸಕ ಹೆಚ್.ಆರ್. ಗವಿಯಪ್ಪ

ವಿಜಯನಗರ (ಹೊಸಪೇಟೆ) : ಊರಿನ ಸಾರ್ವಜನಿಕ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ತಮ್ಮ ಜಾಗ...

Homeಸುದ್ದಿಗಳು

ಕೊಪ್ಪಳ : ಪ್ರತಿಭಾ ಪುರಸ್ಕಾರಕ್ಕೆ ಬನ್ನಿ

ಹರಪನಹಳ್ಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹರಪನಹಳ್ಳಿ ತಾಲೂಕು ಘಟಕದ ವತಿಯಿಂದ 2026-27ನೇ ಸಾಲಿನ...

Homeಸುದ್ದಿಗಳು

ಜಿಲ್ಲೆಯ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಶೇ.100 ಇ-ಫಾರ್ಮ್ ವಿತರಣೆ ಪೂರ್ಣ

ವಿಜಯನಗರ (ಹೊಸಪೇಟೆ)  : ಜಿಲ್ಲೆಯ ಐದು ತಾಲೂಕಿನಿಂದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ...

Homeಸುದ್ದಿಗಳು

ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸದಸ್ಯರ ಆಯ್ಕೆಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : 2026ನೇ ಸಾಲಿಗೆ ಜಿಲ್ಲೆಯಲ್ಲಿ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟು ಜಿಲ್ಲಾ ಮಟ್ಟದ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.