Home ರಾಜಕೀಯ ಸಚಿವ ಸಂತೋಷ ಲಾಡ್-ಕೋಡಿಹಳ್ಳಿ ಭೀಮಪ್ಪ ಚರ್ಚೆ
ರಾಜಕೀಯ

ಸಚಿವ ಸಂತೋಷ ಲಾಡ್-ಕೋಡಿಹಳ್ಳಿ ಭೀಮಪ್ಪ ಚರ್ಚೆ

Share
Santoshlad, labourminister,kodihalli bheemappa,samata resort, harapanahalli
Share

ಹರಪನಹಳ್ಳಿ : ವಿಜಯನಗರ ಜಿಲ್ಲೆ ಹರಪನಹಳ್ಳಿ ಸಮತಾ ರೆಸಾರ್ಟ್‍ಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಆಗಮಿಸಿ ಕಾಂಗ್ರೆಸ್ ಪಕ್ಷದ ಮುಖಂಡ ಕೋಡಿಹಳ್ಳಿ ಭೀಮಪ್ಪ ಅವರೊಂದಿಗೆ ಭಾನುವಾರ ಚರ್ಚೆ ನಡೆಸಿದರು.

ಕಾರ್ಮಿಕ ಇಲಾಖೆಯ ಮೂಲಕ ತಂದಿರುವ ಯೋಜನೆಗಳು, ಕಾರ್ಮಿಕರ ಹಿತಕಾಯುವ ಕಾರ್ಯಕ್ರಮಗಳ ಬಗ್ಗೆ ಕೂಲಂಕುಷವಾಗಿ ಚರ್ಚಿಸಿದರು. ಕಾರ್ಮಿಕರಿಗೆ ಗುರುತಿನ ಚೀಟಿ ನೊಂದಾಣಿ ಮಾಡಿಸುವುದು, ಸರ್ಕಾರದ ಸವಲತ್ತುಗಳು ಸಕಾಲಕ್ಕೆ ಮತ್ತು ಅರ್ಹರಿಗೆ ತಲುಪಿಸಲು ಕಾಳಜಿವಹಿಸಿ ಪಕ್ಷದ ಕಾರ್ಯಕರ್ತರು ಕೆಲಸ ಮಾಡಲು ಹೇಳಿದರು ಎಂದು ಖಚಿತ ಮೂಲಗಳಿಂದ ತಿಳಿದುಬಂದಿದೆ.

ಕಾಂಗ್ರೆಸ್ ಪಕ್ಷದ ಸಂಘಟನೆ, ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಮಹತ್ವಕಾಂಕ್ಷೆ ಯೋಜನೆಗಳು ಬಡವರಿಗೆ, ನಿರ್ಗತಿಕರಿಗೆ, ಮಧ್ಯಮ ವರ್ಗದವರಿಗೆ ವರದಾನ ಆಗಿರುವ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು. ಅವುಗಳ ಬಗ್ಗೆ ಹೆಚ್ಚು ಪ್ರಚುರ ಪಡಿಸಲು ಕಾಂಗ್ರೆಸ್‍ ಕಾರ್ಯಕರ್ತರ ಪಡೆ ಸನ್ನದ್ಧರಾಗಿರಬೇಕು. ವಿರೋಧ ಪಕ್ಷದವರು ಸುಳ್ಳು ಹೇಳಿ, ಜನರನ್ನು ದಿಕ್ಕು ತಪ್ಪಿಸುತ್ತಾರೆ. ಇದರ ಬಗ್ಗೆ ನಮ್ಮ ಪಕ್ಷದ ಕಾರ್ಯಕರ್ತರು ಕೆಲಸ ಮಾಡಬೇಕು ಎಂದು ಸಚಿವರು ತಿಳಿಸಿದ್ದಾರೆ.

‘ಕಾರ್ಮಿಕ ಜಾಗೃತಿ ಅಭಿಯಾನಕ್ಕೆ ಸೂಚನೆ’

ಸಚಿವರಾದ ಸಂತೋಷ್ ಲಾಡ್ ಅವರು ʼಜಿಲ್ಲೆಯಲ್ಲಿ ಆಗಿರುವ ಕಾರ್ಮಿಕ ಕಾರ್ಡ್‍ ಗಳ ನೊಂದಣಿ ಬಗ್ಗೆ ಮಾಹಿತಿ ಪಡೆದುಕೊಂಡರು. ಪ್ರತಿ ತಾಲ್ಲೂಕಿನಲ್ಲೂ ಕಾರ್ಮಿಕರ ನೋಂದಣಿ ಕಾರ್ಡ್ ವಿತರಣೆ ಹಾಗೂ ಜಾಗೃತಿ ಅಭಿಯಾನ ಮಾಡಬೇಕುʼ ಎಂದು ಅಲ್ಲಿಗೆ ಬಂದಿದ್ದ ಜಿಲ್ಲಾ ಕಾರ್ಮಿಕ ಇಲಾಖೆ ಅಧಿಕಾರಿ ಸೂರಪ್ಪ ಹಾಗೂ ತಾಲ್ಲೂಕು ಕಾರ್ಮಿಕ ನಿರೀಕ್ಷಕ ಪ್ರಕಾಶ್ ಗೌಡ ಅವರಿಗೆ ಸೂಚನೆ ನೀಡಿದರು.

ಪರಿಸರ ಸಂರಕ್ಷಿಸಿ, ಪಕ್ಷಿ ಸಂಕುಲ  ಉಳಿಸುವ ಪೊಟೊಗಳನ್ನು ಸಮತಾ ರೆಸಾರ್ಟ್ ಬಳಗ ಸಚಿವರಿಗೆ ನೀಡಿತು. ಇದೇ ವೇಳೆ ಆಗಮಿಸಿದ್ದ ಬಳ್ಳಾರಿ ಸಂಸದ ಈ.ತುಕರಾಂ, ಹೊಸಪೇಟೆ ಶಾಸಕ ಗವಿಯಪ್ಪ ಅವರನ್ನು ಸನ್ಮಾನಿಸಿತು. ಕಾಂಗ್ರೆಸ್ ಪಕ್ಷದ ಮುಖಂಡ ಕೋಡಿಹಳ್ಳಿ ಭೀಮಪ್ಪ, ಕೆಪಿಸಿಸಿ ರಾಜ್ಯ ಸಂಯೋಜಕ ಜಯಪ್ರಕಾಶ್ ಸಾರಥಿ, ಹರಪನಹಳ್ಳಿ ವಿದಾನಸಭೆ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಅರಸೀಕೆರೆ ಎನ್.ಕೊಟ್ರೇಶ್, ಮಜ್ದೂರ್ ಕಾಂಗ್ರೆಸ್ ವಿಜಯನಗರ ಜಿಲ್ಲಾಧ್ಯಕ್ಷ ಎಲ್.ಪ್ರಕಾಶ್ ನಾಯ್ಕ, ಮುಖಂಡ ಶಮಿವುಲ್ಲಾ, ಮಾಧ್ಯಮ ಕಾರ್ಯದರ್ಶಿ ಇರ್ಫಾನ್ ಮುದಗಲ್, ಜೀಷಾನ್, ಶ್ರೀಕಾಂತ ಯಾದವ್, ಚೌಡಪ್ಪ, ಹುಲಿರಾಜ್, ವಲೀ, ಮೆಹಬೂಬ್ ಭಾಷಾ, ಜಬಿವುಲ್ಲಾ, ಸುನೀಲ್, ಕುಮಾರ ಸೇರಿದಂತೆ ಅನೇಕರಿದ್ದರು.

ಸೆಲ್ಫಿಗಾಗಿ ನಾ ಮುಂದು, ತಾ ಮುಂದು

ವಿವಿಧ ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳು, ಕಾರ್ಮಿಕರು ಸಚಿವ ಸಂತೋಷ್‌ ಲಾಡ್‌ ಅವರ ಜೊತೆ ‘ನಾ ಮುಂದು, ತಾ ಮುಂದುʼ  ಎಂದು ಸೆಲ್ಫಿ ತೆಗೆದುಕೊಂಡಿದ್ದು ಗಮನ ಸೆಳೆಯಿತು.

Share

Leave a comment

Leave a Reply

Your email address will not be published. Required fields are marked *

Related Articles
darmastala yojane
Homeರಾಜಕೀಯವಿಶೇಷ ವರದಿಗಳು

ದೇವರ ತಿಮ್ಲಾಪುರದಲ್ಲಿ ನಡೆದ ಮದ್ಯವರ್ಜನ ಶಿಬಿರದ ಮಾಹಿತಿ ಇಲ್ಲಿದೆ

ಹರಪನಹಳ್ಳಿ :  "ಇದು ಕೇವಲ ಶಿಬಿರವಲ್ಲ, ಕುಟುಂಬಗಳನ್ನು ಕಟ್ಟುವ ಹಾಗೂ ಹೆಣ್ಣುಮಕ್ಕಳ ಕಣ್ಣೀರು ಒರೆಸುವ ಪವಿತ್ರ ಕಾರ್ಯ. ಅಂಧಕಾರದಲ್ಲಿದ್ದ ಬಾಳಿಗೆ ಬೆಳಕು ನೀಡುವ ಈ ಕಾರ್ಯ ಸಮಾಜಕ್ಕೆ ಮಾದರಿ ಎಂದು ನೀಲಗುಂದ ಗುಡ್ಡದ ವಿರಕ್ತಮಠದ ಚೆನ್ನಬಸವ ಶಿವಯೋಗಿ ಸ್ವಾಮೀಜಿ ತಿಳಿಸಿದರು. ನಗರದ ಹೊರವಲಯದ ದೇವರ ತಿಮ್ಮಾಲಪುರ ಗ್ರಾಮದ ಶ್ರೀ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದ ಸಮುದಾಯ ಭವನದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದ್ದ '2060ನೇ ಮದ್ಯವರ್ಜನ ಶಿಬಿರ' ಅತ್ಯಂತ ಯಶಸ್ವಿಯಾಗಿ ಮುಕ್ತಾಯಗೊಂಡಿದೆ.ಸಂಸಾರದಲ್ಲಿ ಸರಸ, ವಿರಸಗಳು ಬಂದು...

ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವಿರೋಧ ಆಯ್ಕೆ!
Homeರಾಜಕೀಯ

ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವಿರೋಧ ಆಯ್ಕೆ!

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಶನಿವಾರ ಅತ್ಯಂತ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಸದಾ ಕುತೂಹಲ ಮೂಡಿಸುತ್ತಿದ್ದ...

Homeರಾಜಕೀಯಸುದ್ದಿಗಳು

ಅಡವಿಹಳ್ಳಿಯಲ್ಲಿ ಬಸವೇಶ್ವರ ದೇವಸ್ಥಾನದ ಕಳಸಾರೋಹಣ

ಹರಪನಹಳ್ಳಿ: ಮೊಬೈಲ್ಗೆ ಹೇಗೆ ನೆಟ್ವರ್ಕ್ ಟವರ್ ಮುಖ್ಯವೋ, ಹಾಗೆಯೇ ದೇವಸ್ಥಾನದ ಗೋಪುರಕ್ಕೆ ಕಳಸ ಬಹುಮುಖ್ಯ, ದೇವಸ್ಥಾನಗಳು...

Homeರಾಜಕೀಯ

ಆಡಳಿತಾಧಿಕಾರಿ ನೇಮಿಸಲು ಒತ್ತಾಯ

ಹರಪನಹಳ್ಳಿ : ನಗರದ ಪ್ರಸಿದ್ಧ ಶ್ರೀ ಕೋಟೆ ಆಂಜನೇಯ ದೇವಸ್ಥಾನಕ್ಕೆ  ಹಿಂದೂ ಧಾರ್ಮಿಕ ದತ್ತಿ ಇಲಾಖೆಗೆ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.