Home ರಾಜಕೀಯ ಸತೀಶ ಜಾರಕಿಹೊಳಿ ಹೆಗಲಿಗೆ ಅಹಿಂದ ನಾಯಕತ್ವ
ರಾಜಕೀಯ

ಸತೀಶ ಜಾರಕಿಹೊಳಿ ಹೆಗಲಿಗೆ ಅಹಿಂದ ನಾಯಕತ್ವ

Share
ಸತೀಶ ಜಾರಕಿಹೊಳಿ
Share

ಬೆಂಗಳೂರು : ನಾಡಿನ ಅಹಿಂದ ಸಮುದಾಯಗಳ ನಾಯಕತ್ವವನ್ನು ಸಚಿವರಾದ ಸತೀಶ್ ಜಾರಕಿಹೊಳಿ ಯವರು ವಹಿಸಿಕೊಂಡು ಮುನ್ನಡೆಸಲು ಬೆಂಗಳೂರು ಗಾಂಧಿನಗರದ ಮೌರ್ಯ ಹೋಟೆಲ್ಲಿನಲ್ಲಿ ಶುಕ್ರವಾರ ಜರುಗಿದ  ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ರಾಜ್ಯ ಕಾರ್ಯಕಾರಿ ಸಭೆಯಲ್ಲಿ ಒಕ್ಕೊರಲ ನಿರ್ಣಯ ಕೈಗೊಳ್ಳಲಾಗಿದೆ.

ಸಭೆಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಚಾಲನೆ ನೀಡಿ ಎಲ್ಲರ ಅಭಿಪ್ರಾಯ ಆಲಿಸಿದರು. ಒಕ್ಕೂಟದ ಅಧ್ಯಕ್ಷ ಕೆ.ಎಂ.ರಾಮಚಂದ್ರಪ್ಪ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾವಾರು ಸಂಘಟಕರಿಂದ ಪ್ರಸಕ್ತ ಜರುಗುತ್ತಿರುವ ರಾಜಕೀಯ ಮತ್ತು ಸಾಮಾಜಿಕ ವಿದ್ಯಮಾನಗಳ ಕುರಿತಾಗಿ ಜಿಲ್ಲಾ ವಾರು ಸಂಘಟಕರ ಅಭಿಪ್ರಾಯ ಸಂಗ್ರಹಣೆಗಾಗಿ ಕರೆಯಲಾಗಿದ್ದ ಕಾರ್ಯಕಾರಿ ಸಮಿತಿ ಸಭೆಯಲ್ಲಿ, ಸುಮಾರು ಇನ್ನೂರಕ್ಕಿಂತಲೂ ಹೆಚ್ಚು ಅಭಿಪ್ರಾಯ ಮತ್ತು ಸಲಹೆ ಹಾಗೂ ಒತ್ತಾಯಗಳು ಕೇಳಿಬಂದ ಹಿನ್ನೆಲೆಯಲ್ಲಿ ಸಮೀತಿಯು ಪ್ರಮುಖ 6 ನಿರ್ಣಯಗಳನ್ನು ಕೈಗೊಂಡು ಅದರ ಸಾಕಾರಕ್ಕಾಗಿ ಶ್ರಮಿಸಲಿದೆ.

ನಾಡಿನ ಅಹಿಂದ ಚಳುವಳಿಯ ಪ್ರಮುಖರಾದ ದಾನಪ್ಪ ಕಬ್ಬೇರ್ ಡಾ. ಭೀಮಣ್ಣ ಮೇಟಿ, ಆದರ್ಶ ಯಲ್ಲಪ್ಪ, ನಿಂಗಪ್ಪ ಕುಂಬಾರ, ರಮೇಶ ಹೊದಿಗೆರೆ, ಚಂದ್ರಶೇಖರ್ ಜುಟ್ಟದ್, ತೋಳಿ ಭರಮಣ್ಣ, ದೇವಾನಂದ ನೇಕಾರ್, ಚಿದಾನಂದಪ್ಪ ಹೊಸಪೇಟೆ, ನರಸಿಂಹ ನಾಯಕ, ಚಾಮರಾಜನಗರ ರಫೀಕ್ ಅಹಮದ್, ಪ್ರಸಾದ್ ರೇವರೆಂಡ್, ಮಲ್ಲಿಕಾರ್ಜುನ ಕುಸ್ತಿ, ಗೋಪಾಲ್ ಮಡಿವಾಳ, ಸಭೆಯಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು. ಬಹುತೇಕ 2005 ರ ಹುಬ್ಬಳ್ಳಿ ‘ಅಹಿಂದ’ ಸಮಾವೇಶದ ಹಿಂದಿದ್ದ ಪ್ರೇರಕ ಶಕ್ತಿಗಳು ಇಂದಿನ ಸಭೆಯಲ್ಲಿ ಭಾಗವಹಿಸಿದ್ದವು.  ಸಭೆಯ ನಂತರ ರಾಜ್ಯ ಸಂಚಾಲಕರುಗಳಾದ ಮಾವಳ್ಳಿ ಶಂಕರ್, ಎನ್ ಅನಂತನಾಯ್ಕ, ಕಾರ್ಯಕಾರಿ ಸಮಿತಿಯ ಮುಖಂಡರಾದ ಸುರೇಶ್ ಲಾತೂರ್, ಬಿ ಗೋಪಾಲ್, ಎಣ್ಣೇಗೆರೆ ವೆಂಕಟ, ರಮೇಶ್, ಇರ್ಫಾನ್ ಮುದಗಲ್ ಜಿಲ್ಲಾವಾರು ಅಭಿಪ್ರಾಯಗಳನ್ನು ಸಂಗ್ರಹಿಸಿ ನಿರ್ಣಯಗಳನ್ನು ಮಂಡಿಸಿ ಸಭೆಯ ಒಪ್ಪಿಗೆಯನ್ನು ಪಡೆದು ಅದನ್ನು ಅನುಷ್ಠಾನಗೊಳಿಸಲು ನೀಲನಕ್ಷೆ ತಯಾರಿಸುವುದಾಗಿ ನಿರ್ಧರಿಸಲಾಯಿತು.

ನಿರ್ಣಯಗಳು:

1. ಸಾಮಾಜಿಕ ಆರ್ಥಿಕ ಶೈಕ್ಷಣಿಕ ಸಮೀಕ್ಷಾ ಪ್ರಕ್ರಿಯೆಯನ್ನು ಶೀಘ್ರಗತಿಯಲ್ಲಿ ಪೂರ್ಣಗೊಳಿಸಿ, ಅನುಷ್ಠಾನಕ್ಕೆ ತರಬೇಕು ಎಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಲು ವಿವಿಧ ಕಾರ್ಯಕ್ರಮಗಳನ್ನು ರೂಪಿಸುವುದು.

2. ಮುಖ್ಯಮಂತ್ರಿ ಸ್ಥಾನದಲ್ಲಿರುವ ಮಾನ್ಯ ಸಿದ್ದರಾಮಯ್ಯ ನವರನ್ನು ಯಾವುದೇ ಕಾರಣಕ್ಕೂ ಬದಲಾಯಿಸದೆ ಪೂರ್ಣ ಅವಧಿಯ ವರೆಗೆ ಮುಖ್ಯಮಂತ್ರಿ ಯಾಗಿ ಮುಂದುವರಿಸಬೇಕೆಂದು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರ ಗಮನ ಸೆಳೆಯುವ ಮಹತ್ವದ ಕಾರ್ಯಕ್ರಮಗಳನ್ನು ಆಯೋಜಿಸುವುದು.

3. ನಾಡಿನ ಶೋಷಿತ ಸಮುದಾಯಗಳು ಮಾನ್ಯ ಸಿದ್ದರಾಮಯ್ಯ ಅವರ ಬೆಂಬಲಕ್ಕೆ ಇರಲಿವೆ ಎಂಬುದನ್ನು ಇನ್ನಷ್ಟು ಗಟ್ಟಿಯಾಗಿ ದೊಡ್ಡ ದನಿಯಲ್ಲಿ ನಾಡಿನ ಉದ್ದಗಲಕ್ಕೂ ವ್ಯಾಪಿಸುವಂತೆ ಮಾರ್ದನಿಸುವಂತೆ ಕಾರ್ಯಚಟುವಟಿಕೆ ವಿಸ್ತರಿಸುವುದು.

4. ನಾಡಿನ ಅಹಿಂದ ಸಮುದಾಯಗಳ ನಾಯಕತ್ವವನ್ನು ಮಾನ್ಯ ಸತೀಶ್ ಜಾರಕಿಹೊಳಿ ಯವರು ವಹಿಸಿಕೊಂಡು ಮುನ್ನಡೆಸಬೇಕೆಂದು ಒತ್ತಾಯಿಸಿ ಒಕ್ಕೊರಲ ನಿರ್ಣಯ ಮಾಡಲಾಯಿತು.

5. ರಾಜ್ಯವ್ಯಾಪಿ ಅಹಿಂದ, ಶೋಷಿತ ಸಮುದಾಯಗಳ ಜಿಲ್ಲಾ, ತಾಲ್ಲೂಕು ಮಟ್ಟದ ಸಂಘಟನೆ, ಜನಜಾಗೃತಿ ಕಾರ್ಯಕ್ರಮ ಗಳನ್ನು ಆಯೋಜಿಸುವುದು.

6. ಹೊಸ ವರ್ಷದ ಮಧ್ಯ ಭಾಗದಲ್ಲಿ ಶೋಷಿತ ಸಮುದಾಯಗಳನ್ನು ಒಂದುಗೂಡಿಸಿ, ದೇಶದ ಇತರೆ ರಾಜ್ಯಗಳ ಹಿಂದುಳಿದ ವರ್ಗಗಳನ್ನು, ದಲಿತ, ಬುಡಕಟ್ಟು, ಅಲ್ಪಸಂಖ್ಯಾತ ಹಾಗೂ ಅಲಕ್ಷಿತ ಸಮುದಾಯಗಳನ್ನು ಪ್ರತಿನಿಧಿಸುವ ನಾಯಕರುಗಳ ಉಪಸ್ಥಿತಿಯಲ್ಲಿ ರಾಜ್ಯ ಮಟ್ಟದ ಸಮಾವೇಶ ಆಯೋಜಿಸುವುದು.

Share

Leave a comment

Leave a Reply

Your email address will not be published. Required fields are marked *

Related Articles
darmastala yojane
Homeರಾಜಕೀಯವಿಶೇಷ ವರದಿಗಳು

ದೇವರ ತಿಮ್ಲಾಪುರದಲ್ಲಿ ನಡೆದ ಮದ್ಯವರ್ಜನ ಶಿಬಿರದ ಮಾಹಿತಿ ಇಲ್ಲಿದೆ

ಹರಪನಹಳ್ಳಿ :  "ಇದು ಕೇವಲ ಶಿಬಿರವಲ್ಲ, ಕುಟುಂಬಗಳನ್ನು ಕಟ್ಟುವ ಹಾಗೂ ಹೆಣ್ಣುಮಕ್ಕಳ ಕಣ್ಣೀರು ಒರೆಸುವ ಪವಿತ್ರ ಕಾರ್ಯ. ಅಂಧಕಾರದಲ್ಲಿದ್ದ ಬಾಳಿಗೆ ಬೆಳಕು ನೀಡುವ ಈ ಕಾರ್ಯ ಸಮಾಜಕ್ಕೆ ಮಾದರಿ ಎಂದು ನೀಲಗುಂದ ಗುಡ್ಡದ ವಿರಕ್ತಮಠದ ಚೆನ್ನಬಸವ ಶಿವಯೋಗಿ ಸ್ವಾಮೀಜಿ ತಿಳಿಸಿದರು. ನಗರದ ಹೊರವಲಯದ ದೇವರ ತಿಮ್ಮಾಲಪುರ ಗ್ರಾಮದ ಶ್ರೀ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದ ಸಮುದಾಯ ಭವನದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದ್ದ '2060ನೇ ಮದ್ಯವರ್ಜನ ಶಿಬಿರ' ಅತ್ಯಂತ ಯಶಸ್ವಿಯಾಗಿ ಮುಕ್ತಾಯಗೊಂಡಿದೆ.ಸಂಸಾರದಲ್ಲಿ ಸರಸ, ವಿರಸಗಳು ಬಂದು...

ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವಿರೋಧ ಆಯ್ಕೆ!
Homeರಾಜಕೀಯ

ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವಿರೋಧ ಆಯ್ಕೆ!

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಶನಿವಾರ ಅತ್ಯಂತ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಸದಾ ಕುತೂಹಲ ಮೂಡಿಸುತ್ತಿದ್ದ...

Homeರಾಜಕೀಯಸುದ್ದಿಗಳು

ಅಡವಿಹಳ್ಳಿಯಲ್ಲಿ ಬಸವೇಶ್ವರ ದೇವಸ್ಥಾನದ ಕಳಸಾರೋಹಣ

ಹರಪನಹಳ್ಳಿ: ಮೊಬೈಲ್ಗೆ ಹೇಗೆ ನೆಟ್ವರ್ಕ್ ಟವರ್ ಮುಖ್ಯವೋ, ಹಾಗೆಯೇ ದೇವಸ್ಥಾನದ ಗೋಪುರಕ್ಕೆ ಕಳಸ ಬಹುಮುಖ್ಯ, ದೇವಸ್ಥಾನಗಳು...

Homeರಾಜಕೀಯ

ಆಡಳಿತಾಧಿಕಾರಿ ನೇಮಿಸಲು ಒತ್ತಾಯ

ಹರಪನಹಳ್ಳಿ : ನಗರದ ಪ್ರಸಿದ್ಧ ಶ್ರೀ ಕೋಟೆ ಆಂಜನೇಯ ದೇವಸ್ಥಾನಕ್ಕೆ  ಹಿಂದೂ ಧಾರ್ಮಿಕ ದತ್ತಿ ಇಲಾಖೆಗೆ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.