Home ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದ ಹಿರಿಯ ನಾಗರಿಕರ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ
Homeಸುದ್ದಿಗಳು

ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದ ಹಿರಿಯ ನಾಗರಿಕರ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

Share
Share

ದಾವಣಗೆರೆ : ಅಕ್ಟೋಬರ್ 1 ರಂದು  ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ಆಚರಿಸುವ ಪ್ರಯುಕ್ತ ವಿವಿಧ ಕ್ಷೇತ್ರಗಳಾದ ಶಿಕ್ಷಣ ಕ್ಷೇತ್ರ, ಸಾಹಿತ್ಯಕ್ಷೇತ್ರ, ಕಲೆ, ಕಾನೂನು, ಪ್ರತಿಭೆ, ಕ್ರೀಡೆ ಮತ್ತು ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸಮಾಜ ಸೇವೆ ಈ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ 6 ವೈಯಕ್ತಿಕ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ 1 ಸಂಸ್ಥೆಗೆ ಪ್ರಶಸ್ತಿ ಸೇರಿ ಒಟ್ಟು 7 ಪ್ರಶಸ್ತಿಗಳನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ನಮೂನೆ-1 ಹಾಗೂ 2ರಲ್ಲಿ ಅತ್ಯುತ್ತಮವಾಗಿ ಸೇವೆ ಸಲ್ಲಿಸಿದ, ಸಲ್ಲಿಸುತ್ತಿರುವ ಹಿರಿಯ ನಾಗರಿಕರು ಹಾಗೂ ಸಂಸ್ಥೆಗಳು ದ್ವಿಪ್ರತಿಯಲ್ಲಿ ಅರ್ಜಿ ಸಲ್ಲಿಸಬಹುದು. ಈ ಅರ್ಜಿಗಳನ್ನು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿಗಳ ಕಚೇರಿಯಿಂದ ಪಡೆದು ಆಗಸ್ಟ್ 24 ರೊಳಗೆ ಸಲ್ಲಿಸಬೇಕು.

ಅರ್ಜಿ ಪಡೆಯಲು ಹಾಗೂ ಹೆಚ್ಚಿನ ಮಾಹಿತಿಗಾಗಿ  ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ದೇವರಾಜ್‍ ಅರಸ್ ಬಡಾವಣೆ ಬಿ ಬ್ಲಾಕ್,ದಾವಣಗೆರೆ. ಜಿಲ್ಲಾ ವಿಕಲಚೇತನರ ಸಹಾಯವಾಣಿ ಕೇಂದ್ರ: ಫೋ: 08192-263939, ನಿವೃತ್ತ ನೌಕರರ ಸಂಘದ ಕಾರ್ಯದರ್ಶಿ,  ಗುರುಮೂರ್ತಿ ಮೊ.ಸಂ 9844143827, ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ: ಫೋ: 7483968224, ಹಿರಿಯ ನಾಗರಿಕರ ಹಗಲು ಯೋಗ ಕ್ಷೇಮ ಕೇಂದ್ರ ಮೊ.ಸಂ: 9148672498 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ  ರಶ್ಮಿ. ಬಿ ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ನರೇಗಾ ಮಾದರಿ ಕಾಮಗಾರಿ ಮರುಸ್ಥಾಪನೆಗೆ ಆಗ್ರಹ

ಹರಪನಹಳ್ಳಿ : ಹೊಸದಾಗಿ ಜಾರಿಗೆ ತಂದಿರುವ ವಿಬಿಜಿ ರಾಮ್‍ಜಿ ಕಾಯ್ದೆಯಡಿ ಹಳೆಯ ನರೇಗಾ ಮಾದರಿ ಕಾಮಗಾರಿಗಳನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸಿ ಗ್ರಾಮೀಣ ಕೂಲಿ...

Homeಶಿಕ್ಷಣ

ವಿದ್ಯಾರ್ಥಿ ದೆಸೆಯಲ್ಲೇ ದೊಡ್ಡಮಟ್ಟದ ಸಾಧನೆಯ ಗುರಿ ಇರಲಿ

ಹರಪನಹಳ್ಳಿ: ಶಿಕ್ಷಣ ಪಡೆಯುವಾಗಲೇ ವಿದ್ಯಾರ್ಥಿಗಳು ದೊಡ್ಡಮಟ್ಟದ ಸಾಧನೆಯ ಗುರಿ ಇಟ್ಟುಕೊಳ್ಳಬೇಕು ಎಂದು ಸ್ಥಳೀಯ ಸಲಹಾ ಸಮಿತಿಯ ಅಧ್ಯಕ್ಷರಾದ ಪಿ. ಮಹಾಬಲೇಶ್ವರಗೌಡ್ರು ಕಿವಿಮಾತು ಹೇಳಿದರು. ನಗರದ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ ಎಚ್.ಪಿ.ಎಸ್ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ 2026 -27ನೇ...

Homeಸುದ್ದಿಗಳು

ಮಾನವನ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ

ದಾವಣಗೆರೆ : ಕರ್ನಾಟಕವನ್ನು ಮಾನವ ಕಳ್ಳ ಸಾಗಾಣಿಕೆಯಿಂದ ಮುಕ್ತಗೊಳಿಸಲು ಸಂಕಷ್ಟದಲ್ಲಿರುವ ಜನರನ್ನು ರಕ್ಷಿಸಲು ಹಾಗೂ ಸಾಗಾಣಿಕೆಗೆ...

Homeಸುದ್ದಿಗಳು

ಉಚಿತ ಆರೋಗ್ಯ ಮತ್ತು ಕಣ್ಣಿನ ತಪಾಸಣೆ

ಕಲಬುರಗಿ : ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್ ಕಡಗಂಚಿ , ಹೋಲಿ ಕ್ರಾಸ್ ಅಫಜಲಪುರ,...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.