ದಾವಣಗೆರೆ : ಅಕ್ಟೋಬರ್ 1 ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ಆಚರಿಸುವ ಪ್ರಯುಕ್ತ ವಿವಿಧ ಕ್ಷೇತ್ರಗಳಾದ ಶಿಕ್ಷಣ ಕ್ಷೇತ್ರ, ಸಾಹಿತ್ಯಕ್ಷೇತ್ರ, ಕಲೆ, ಕಾನೂನು, ಪ್ರತಿಭೆ, ಕ್ರೀಡೆ ಮತ್ತು ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸಮಾಜ ಸೇವೆ ಈ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ 6 ವೈಯಕ್ತಿಕ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ 1 ಸಂಸ್ಥೆಗೆ ಪ್ರಶಸ್ತಿ ಸೇರಿ ಒಟ್ಟು 7 ಪ್ರಶಸ್ತಿಗಳನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ನಮೂನೆ-1 ಹಾಗೂ 2ರಲ್ಲಿ ಅತ್ಯುತ್ತಮವಾಗಿ ಸೇವೆ ಸಲ್ಲಿಸಿದ, ಸಲ್ಲಿಸುತ್ತಿರುವ ಹಿರಿಯ ನಾಗರಿಕರು ಹಾಗೂ ಸಂಸ್ಥೆಗಳು ದ್ವಿಪ್ರತಿಯಲ್ಲಿ ಅರ್ಜಿ ಸಲ್ಲಿಸಬಹುದು. ಈ ಅರ್ಜಿಗಳನ್ನು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿಗಳ ಕಚೇರಿಯಿಂದ ಪಡೆದು ಆಗಸ್ಟ್ 24 ರೊಳಗೆ ಸಲ್ಲಿಸಬೇಕು.
ಅರ್ಜಿ ಪಡೆಯಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ದೇವರಾಜ್ ಅರಸ್ ಬಡಾವಣೆ ಬಿ ಬ್ಲಾಕ್,ದಾವಣಗೆರೆ. ಜಿಲ್ಲಾ ವಿಕಲಚೇತನರ ಸಹಾಯವಾಣಿ ಕೇಂದ್ರ: ಫೋ: 08192-263939, ನಿವೃತ್ತ ನೌಕರರ ಸಂಘದ ಕಾರ್ಯದರ್ಶಿ, ಗುರುಮೂರ್ತಿ ಮೊ.ಸಂ 9844143827, ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ: ಫೋ: 7483968224, ಹಿರಿಯ ನಾಗರಿಕರ ಹಗಲು ಯೋಗ ಕ್ಷೇಮ ಕೇಂದ್ರ ಮೊ.ಸಂ: 9148672498 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ರಶ್ಮಿ. ಬಿ ತಿಳಿಸಿದ್ದಾರೆ.
- Application Deadline August 24
- application invited
- Davanagere News
- Disability and Senior Citizens Empowerment Department
- Karnataka News
- October 1
- Rashmi B
- Senior Citizens State Award
- Social Service Award
- World Senior Citizens Day
- ಅಕ್ಟೋಬರ್ 1
- ಅರ್ಜಿ ಆಹ್ವಾನ
- ಅರ್ಜಿ ಸಲ್ಲಿಕೆ ದಿನಾಂಕ
- ಕರ್ನಾಟಕ ವಾರ್ತೆ
- ದಾವಣಗೆರೆ ಸುದ್ದಿ
- ರಶ್ಮಿ ಬಿ
- ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ
- ವಿಶ್ವ ಹಿರಿಯ ನಾಗರಿಕರ ದಿನಾಚರಣೆ
- ಸಮಾಜ ಸೇವೆ
- ಹಿರಿಯ ನಾಗರಿಕರ ರಾಜ್ಯ ಪ್ರಶಸ್ತಿ
Leave a comment