Home ಹರಪನಹಳ್ಳಿ : ಹಾಸ್ಟೆಲ್ ಆರಂಭಿಸಲು ಎಸ್‌ಎಫ್‌ ಐ ಆಗ್ರಹ
Homeಶಿಕ್ಷಣ

ಹರಪನಹಳ್ಳಿ : ಹಾಸ್ಟೆಲ್ ಆರಂಭಿಸಲು ಎಸ್‌ಎಫ್‌ ಐ ಆಗ್ರಹ

Share
Share

ಹರಪನಹಳ್ಳಿ : ಶಾಲಾ-ಕಾಲೇಜುಗಳು ಆರಂಭವಾದರೂ ಹಾಸ್ಟೆಲ್‌ಗಳು ತೆರೆಯದ ಕಾರಣ ಗ್ರಾಮೀಣ ವಿದ್ಯಾರ್ಥಿಗಳು ಪರದಾಡುತ್ತಿದ್ದು, ತಕ್ಷಣವೇ ವಸತಿ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ತಾಲ್ಲೂಕು ಸಮಿತಿಯು ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದೆ.

ಪ್ರಸಕ್ತ ಸಾಲಿನ ತರಗತಿಗಳು ಆರಂಭವಾಗಿದ್ದರೂ ವಸತಿ ನಿಲಯಗಳ ಆಯ್ಕೆ ಪಟ್ಟಿ ಬಿಡುಗಡೆ ವಿಳಂಬವಾಗಿದೆ. ಇದರಿಂದ ಬಡ ವಿದ್ಯಾರ್ಥಿಗಳು ನಿತ್ಯ ದೂರದ ಊರುಗಳಿಂದ ಕಾಲೇಜುಗಳಿಗೆ ಬರಲಾಗದೆ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಅರ್ಜಿ ಸಲ್ಲಿಸಿದ ಎಲ್ಲಾ ಎಸ್‌ಸಿ, ಎಸ್‌ಟಿ ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಮೆರಿಟ್ ಬದಿಗಿಟ್ಟು ವಸತಿ ನೀಡಬೇಕು.

ಮಾಸಿಕ ಆಹಾರ ಭತ್ಯೆಯನ್ನು ಕನಿಷ್ಠ ₹4,500 ಕ್ಕೆ ಹೆಚ್ಚಿಸಬೇಕು ಹಾಗೂ ಹಾಸ್ಟೆಲ್‌ಗಳಲ್ಲಿ ಕಂಪ್ಯೂಟರ್ ಮತ್ತು ಉಚಿತ ವೈ-ಫೈ ಸೌಲಭ್ಯ ಕಲ್ಪಿಸಬೇಕು ಎಂದು ಜಿಲ್ಲಾ ಕಾರ್ಯದರ್ಶಿ ಶಿವಾರೆಡ್ಡಿ ಹಾಗೂ ತಾಲ್ಲೂಕು ಸಂಚಾಲಕ ಮಲ್ಲಿಕಾರ್ಜುನ ಒತ್ತಾಯಿಸಿದ್ದಾರೆ. ಸಂಜುನಾಯ್ಕ, ಗಣೇಶ್, ಅಂಜು, ಸಂಜು, ಸುದೀಪ, ಬಸವರಾಜ್, ಇರ್ಫಾನ್, ಪ್ರಕಾಶ್ , ಬೋವಿ ಅಂಜಿನಪ್ಪ, ಕೆ. ಹನುಮಂತ ಇತರರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರಸ್ತೆ ನಿರ್ಮಾಣಕ್ಕೆ ಜಾಗ ತ್ಯಾಗ ಮಾಡಿದ ಗ್ರಾಮಸ್ಥರ ಋಣ ತೀರಿಸಲಾಗದು: ಶಾಸಕ ಹೆಚ್.ಆರ್. ಗವಿಯಪ್ಪ

ವಿಜಯನಗರ (ಹೊಸಪೇಟೆ) : ಊರಿನ ಸಾರ್ವಜನಿಕ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ತಮ್ಮ ಜಾಗ...

Homeಅಪರಾಧ

ಹರಪನಹಳ್ಳಿ: ನಕಲಿ ದಾಖಲೆ ಸೃಷ್ಟಿಸಿ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಹರಪನಹಳ್ಳಿ : ನಕಲಿ ದಾಖಲೆ ಸೃಷ್ಟಿಸಿಕೊಂಡು ತನ್ನ ಹೆಸರಿಗೆ ಆಸ್ತಿ ಪತ್ರಗಳನ್ನು ಮಾಡಿಕೊಂಡು ಪರಾರಿಯಾಗಿದ್ದ 12...

Homeಸುದ್ದಿಗಳು

ಕೊಪ್ಪಳ : ಪ್ರತಿಭಾ ಪುರಸ್ಕಾರಕ್ಕೆ ಬನ್ನಿ

ಹರಪನಹಳ್ಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹರಪನಹಳ್ಳಿ ತಾಲೂಕು ಘಟಕದ ವತಿಯಿಂದ 2026-27ನೇ ಸಾಲಿನ...

Homeಕೃಷಿ

ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ಎಂದು ಘೋಷಿಸಲು ಆಗ್ರಹಿಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ

ಹರಪನಹಳ್ಳಿ : ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ತಾಲ್ಲೂಕು ಎಂದು ಘೋಷಿಸಬೇಕು ಎಂದು ಆಗ್ರಹಿಸಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.