Home ಸುದ್ದಿಗಳು ಅಡುಗೆ ಅನಿಲ ವಿತರಣೆ ವಿಳಂಬ :  ʼಶಕ್ತಿ ಅಭಿಯಾನʼ ಪ್ರತಿಭಟನೆ
ಸುದ್ದಿಗಳು

ಅಡುಗೆ ಅನಿಲ ವಿತರಣೆ ವಿಳಂಬ :  ʼಶಕ್ತಿ ಅಭಿಯಾನʼ ಪ್ರತಿಭಟನೆ

Share
MP VEENA
Share

ಹರಪನಹಳ್ಳಿ :   ಅಡುಗೆ ಅನಿಲದ (ಎಲ್‌ಪಿಜಿ) ದರ ಮಿತಿಮೀರಿ ಏರಿಕೆ ಹಾಗೂ ಗ್ಯಾಸ್ ವಿತರಣೆಯಲ್ಲಿ ವ್ಯತ್ಯಯ  ಖಂಡಿಸಿ ‘ಶಕ್ತಿ ಅಭಿಯಾನ’ದ ವತಿಯಿಂದ ಶನಿವಾರ ಪ್ರತಿಭಟನಾ ಮೆರವಣಿಗೆ ಜರುಗಿತು.

ಡಾ.ಬಿ.ಆರ್.ಅಂಬೇಡ್ಕರ ವೃತ್ತದಿಂದ ತಾಲ್ಲೂಕು ಆಡಳಿತ ಸೌಧಕ್ಕೆ ಆಗಮಿಸಿದ ಶಕ್ತಿ ಅಭಿಯಾನದ ಕಾರ್ಯಕರ್ತರು ತಹಶೀಲ್ದಾರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಶಕ್ತಿ ಅಭಿಯಾನದ ರಾಜ್ಯ ಸಂಚಾಲಕಿ ಎಂ.ಪಿ.ವೀಣಾ ಮಹಾಂತೇಶ್ ಮಾತನಾಡಿ, ಅಡುಗೆ ಅನಿಲ ದರ ಮಿತಿಮೀರಿ ಏರಿಕೆಯಾಗಿದೆ. ಪ್ರತಿ ಹಳ್ಳಿಯಲ್ಲೂ ಯಾವುದೇ ಕುಟುಂಬ ಒಂದು ಸಿಲಿಂಡರ್ ಪಡೆಯಲು ವಾರಗಟ್ಟಲೆ ಕಾಯಬೇಕಾಗಿದೆ, ಇದರಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ ಎಂದು ಕಿಡಿಕಾರಿದರು.

ದಿನೇ ದಿನೇ ಗಗನಕ್ಕೇರುತ್ತಿರುವ ಅಡುಗೆ ಅನಿಲದ ಬೆಲೆಯಿಂದಾಗಿ ಸಾಮಾನ್ಯ ಹಾಗೂ ಮಧ್ಯಮ ವರ್ಗದ ಕುಟುಂಬಗಳ ದೈನಂದಿನ ಬದುಕು ಅಸ್ತವ್ಯಸ್ತಗೊಂಡಿದೆ. ಬೆಲೆ ಏರಿಕೆಯ ಬರೆಯ ಜೊತೆಗೆ, ತಾಲ್ಲೂಕಿನಲ್ಲಿ ಗ್ಯಾಸ್ ಸರಬರಾಜು ಸಂಪೂರ್ಣವಾಗಿ ಹದಗೆಟ್ಟಿದೆ. ರಾಜ್ಯದ ಸಾಂವಿಧಾನಿಕ ಮುಖ್ಯಸ್ಥರಾಗಿರುವ ರಾಜ್ಯಪಾಲರು ಈ ಗಂಭೀರ ಸಮಸ್ಯೆಯನ್ನು ಪರಿಗಣಿಸಿ, ತಕ್ಷಣವೇ ಕೇಂದ್ರ ಸರ್ಕಾರದ ಗಮನಕ್ಕೆ ತರುವ ಮೂಲಕ ಬೆಲೆ ನಿಯಂತ್ರಣಕ್ಕೆ ಮುಂದಾಗಬೇಕು ಎಂದು ಒತ್ತಾಯಿಸಿದರು. ದಾದಾಪೀರ, ಜೀಷಾನ್‌ ಹ್ಯಾರಿಸ್‌, ಎಚ್.ನೇತ್ರಾವತಿ, ರೇಣುಕಾ, ಗಾಯತ್ರಿ, ಸಾದಿಕ್‌, ಶಿವಣ್ಣ, ಗಂಗಜ್ಜಿ ನಾಗರಾಜ್‌, ಇಸ್ಮಾಯಿಲ್‌, ರಾಜು ಇತರರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರಸ್ತೆ ನಿರ್ಮಾಣಕ್ಕೆ ಜಾಗ ತ್ಯಾಗ ಮಾಡಿದ ಗ್ರಾಮಸ್ಥರ ಋಣ ತೀರಿಸಲಾಗದು: ಶಾಸಕ ಹೆಚ್.ಆರ್. ಗವಿಯಪ್ಪ

ವಿಜಯನಗರ (ಹೊಸಪೇಟೆ) : ಊರಿನ ಸಾರ್ವಜನಿಕ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ತಮ್ಮ ಜಾಗ...

Homeಸುದ್ದಿಗಳು

ಕೊಪ್ಪಳ : ಪ್ರತಿಭಾ ಪುರಸ್ಕಾರಕ್ಕೆ ಬನ್ನಿ

ಹರಪನಹಳ್ಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹರಪನಹಳ್ಳಿ ತಾಲೂಕು ಘಟಕದ ವತಿಯಿಂದ 2026-27ನೇ ಸಾಲಿನ...

Homeಸುದ್ದಿಗಳು

ಜಿಲ್ಲೆಯ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಶೇ.100 ಇ-ಫಾರ್ಮ್ ವಿತರಣೆ ಪೂರ್ಣ

ವಿಜಯನಗರ (ಹೊಸಪೇಟೆ)  : ಜಿಲ್ಲೆಯ ಐದು ತಾಲೂಕಿನಿಂದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ...

Homeಸುದ್ದಿಗಳು

ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸದಸ್ಯರ ಆಯ್ಕೆಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : 2026ನೇ ಸಾಲಿಗೆ ಜಿಲ್ಲೆಯಲ್ಲಿ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟು ಜಿಲ್ಲಾ ಮಟ್ಟದ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.