Home ಶಾಮನೂರು ಶಿವಶಂಕರಪ್ಪ ಇನ್ನಿಲ್ಲ
Home

ಶಾಮನೂರು ಶಿವಶಂಕರಪ್ಪ ಇನ್ನಿಲ್ಲ

Share
ಶಾಮನೂರು ಶಿವಶಂಕರಪ್ಪ
Share

ದಾವಣಗೆರೆ : ಅಖಿಲ ಭಾರತ ವೀರಶೈವ  ಲಿಂಗಾಯತ ಮಹಾಸಭಾ ಅಧ್ಯಕ್ಷರು, ದಾವಣಗೆರೆ ದಕ್ಷಿಣ ವಿದಾನಸಭೆ ಕ್ಷೇತ್ರದ ಶಾಸರಾಗಿದ್ದ ಹಿರಿಯ ರಾಜಕಾರಣಿ ಶಾಮನೂರು ಶಿವಶಂಕರಪ್ಪ ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಶಾಮನೂರು ಶಿವಶಂಕರಪ್ಪ ಅವರು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಶಾಮನೂರು ಶಿವಶಂಕರಪ್ಪ ಅವರು 1931, ಜೂನ್‌ 16ರಂದು ಜನಿಸಿದ್ದರು. ಮುತ್ಸದ್ದಿ ರಾಜಕಾರಣಿ ಆಗಿದ್ದ ಶಿವಶಂಕರಪ್ಪ ಅವರು ಕಾಂಗ್ರೆಸ್‌ ಪಕ್ಷದ ಖಜಾಂಚಿಯಾಗಿ ಹಲವು ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ.

ರಾಜ್ಯ ಸರ್ಕಾರದಲ್ಲಿ ಸಚಿವರಾಗಿ ಹಲವು ಖಾತೆಗಳನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ. ಇದರೊಟ್ಟಿಗೆ ಸಮಾಜ ಸೇವೆಯಲ್ಲಿ ಮುಂಚೂಣಿ ವಹಿಸಿದ್ದರು. ಶ್ಯಾಮನೂರ್ ಶಿವಶಂಕರಪ್ಪರವರು ದಾವಣಗೆರೆಯ ಅಂಗವಿಕಲರ ಆಶಾಕಿರಣ ಟ್ರಸ್ಟ್, ದಾವಣಗೆರೆ ಕ್ರಿಕೆಟ್ ಕ್ಲಬ್ ಮತ್ತು ದಾವಣಗೆರೆ ಸ್ಪೋರ್ಟ್ಸ್ ಕ್ಲಬ್‌ನ ಅಧ್ಯಕ್ಷರಾಗಿದ್ದರು.  ಬಾಪೂಜಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ & ಟೆಕ್ನಾಲಜಿ ಮತ್ತು ಹಲವಾರು ವೃತ್ತಿಪರ ಶಿಕ್ಷಣ ಸಂಸ್ಥೆಗಳು ಸೇರಿ ಸರಪಳಿಯಾಗಿರುವ, ಬಾಪೂಜಿ ಎಂಜಿನಿಯರಿಂಗ್ ಅಸೋಸಿಯೇಷನ್‌ ಅಧ್ಯಕ್ಷರಾಗಿದ್ದರು. ಮತ್ತು ಕೈಗಾರಿಕೋದ್ಯಮಿಯಾಗಿದ್ದು, ಹರಪನಹಳ್ಳಿ ತಾಲ್ಲೂಕು ದುಗ್ಗಾವತಿ ಗ್ರಾಮದಲ್ಲಿ ಶಾಮನೂರು ಶುಗರ್ಸ್‌ ಸಕ್ಕರೆ ಕಾರ್ಖಾನೆ ಮತ್ತು ಡಿಸ್ಟಿಲರೀಸ್‌ ಉದ್ಯಮ ಕಟ್ಟಿ ಬೆಳೆಸಿದ್ದರು.

ರಾಜಕೀಯ

ಶಿವಶಂಕರಪ್ಪನವರು ದಾವಣಗೆರೆ ಜಿಲ್ಲೆಯಲ್ಲಿ 2008  ಹಾಗು 2013, 2018ರ ವಿಧಾನ ಸಭಾ ಚುನಾವಣೆ ಸೇರಿ ಒಟ್ಟು 6 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಹಾಗೂ ಸಂಪುಟ ದರ್ಜೆಯ ಸಚಿವರಾಗಿ ಹಲವು ಬಾರಿ ಕಾರ್ಯ ನಿರ್ವಹಿಸಿದ್ದರು.

 

 

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಹರಪನಹಳ್ಳಿ : ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ 

ಪ್ರಜಾಸೇವ ಆಂದೋಲನ ಜನರ ಹೃದಯಕ್ಕೆ ಮುಟ್ಟುವಂತಿರಲಿ ಹರಪನಹಳ್ಳಿ :  ಹಿಂದೆ ತಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯುವ ಭರವಸೆಯಿಲ್ಲದೆ...

Homeಸುದ್ದಿಗಳು

ಬಾಲಕನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ 

ಹೊಸಪೇಟೆ (ವಿಜಯನಗರ ಜಿಲ್ಲೆ ) : ಏಳು ವರ್ಷದ ಬಾಲಕನನ್ನು ಅಪಹರಿಸಿ ಕಾಲುವೆಗೆ ಎಸೆದು ಕೊಲೆ...

Homeಸುದ್ದಿಗಳು

ಜೆಡಿಎಸ್ ಅಧ್ಯಕ್ಷರಾಗಿ ವಿ. ಮಲ್ಕಪ್ಪ ಆಯ್ಕೆ

ಹರಪನಹಳ್ಳಿ : ತಾಲ್ಲೂಕು ಜಾತ್ಯಾತೀತ ಜನತಾದಳದ (ಜೆಡಿಎಸ್) ನೂತನ ಅಧ್ಯಕ್ಷರಾಗಿ ತಾವರೆಗೊಂದಿ ಗ್ರಾಮದ ವಿ. ಮಲ್ಕಪ್ಪ...

Homeಸುದ್ದಿಗಳು

ಮಕ್ಕಳಿಗೆ ವಿದ್ಯೆಯೊಂದಿಗೆ ಉತ್ತಮ ಸಂಸ್ಕಾರ ನೀಡುವ ಹೊಣೆ ಎಲ್ಲರದ್ದು: ಪ್ರಾಂಶುಪಾಲ ಡಾ. ಎಂ. ಸುರೇಶ್

ಹರಪನಹಳ್ಳಿ : 'ಇಂದಿನ ಮಕ್ಕಳಿಗೆ ವಿದ್ಯೆಯ ಜೊತೆಗೆ ಉತ್ತಮ ಸಂಸ್ಕಾರವನ್ನು ನೀಡುವ ಹೊಣೆಯನ್ನು ಪ್ರತಿಯೊಬ್ಬರೂ ಹೊರಬೇಕು'...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.