ಹರಪನಹಳ್ಳಿ: ‘ಕ್ಷೇತ್ರದಲ್ಲಿ ಹೆಚ್ಚು ಅಲ್ಪಸಂಖ್ಯಾತ ಸಮುದಾಯವಿದ್ದು, ಸಮಗ್ರ ಅನುದಾನ ಬಳಸಿ ಅಭಿವೃದ್ಧಿಗೆ ಶ್ರಮಿಸುವುದಾಗಿ’ ಶಾಸಕಿ ಎಂ.ಪಿ ಲತಾ ಮಲ್ಲಿಕಾರ್ಜುನ ಹೇಳಿದರು.
ತಾಲ್ಲೂಕಿನ ಶೃಂಗಾರತೋಟದ ಬಳಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಉನ್ನತಿಕರಿಸಿದ ಸಿಬ್ಬಂದಿ ವಸತಿ ನಿಲಯದ ಕಟ್ಟಡ ಶಂಕುಸ್ಥಾಪನೆ ಸಮಾರಂಭ ನೆರವೇರಿಸಿ ಮಾತನಾಡಿದರು. ₹6.33 ಕೋಟಿ ವೆಚ್ಚದಲ್ಲಿ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಇಲ್ಲಿನ ಮುರಾರ್ಜಿ ವಸತಿ ಶಾಲೆ ಕಟ್ಟಡ ಕಾಮಗಾರಿ ಅಪೂರ್ಣಗೊಂಡಿದೆ. ಸಂಬಂಧಪಟ್ಟವರಿಗೆ ನೋಟಿಸ್ ಜಾರಿ ಮಾಡಿ, ಕಾಮಗಾರಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲು ಅಲ್ಪ ಸಂಖ್ಯಾತರ ಇಲಾಖೆಯ ಜಿಲ್ಲಾ ಅಧಿಕಾರಿ ಜಾವೀದ್ ಕಾರಂಗಿ ಅವರಿಗೆ ಸೂಚನೆ ನೀಡಿದರು. ಹೆಚ್ಚುವರಿ ಅನುದಾನ ಅಗತ್ಯವಿದ್ದರೆ ಬಿಡುಗಡೆ ಮಾಡುವ ಭರವಸೆ ನೀಡಿದರು.
ಮೌಲಾನಾ ಅಜಾದ ವಸತಿ ಶಾಲೆಗೆ 4 ಎಕರೆ ಭೂಮಿ ಮಂಜೂರು ಆಗಿದೆ. ಅದಷ್ಟು ಬೇಗನೆ ಕಾರ್ಯ ಆರಂಭವಾಗಲಿದ್ದು, ಮುಂದಿನ ಶೈಕ್ಷಣಿಕ ವರ್ಷದೊಳಗೆ ಸುಸಜ್ಜಿತ ಶಾಲಾ ಕಟ್ಟಡ ಲೋಕಾರ್ಪಣೆಗೆ ಶ್ರಮಿಸಲಾಗುವುದು. ಅಭಿವೃದ್ಧಿಗೆ ತಾವೆಲ್ಲರೂ ಸಹಕಾರ ನೀಡಬೇಕು ಎಂದರು.
ಅಲ್ಪ ಸಂಖ್ಯಾತರ ಇಲಾಖೆಯ ಜಿಲ್ಲಾ ಅಧಿಕಾರಿ ಜಾವೀದ್ ಕಾರಂಗಿ ಮಾತನಾಡಿ, ‘ ಅಲ್ಪಸಂಖ್ಯಾತ ಇಲಾಖೆಯ ಅನುದಾನ ಸದ್ಬಳಿಕೆಯಲ್ಲಿ ಹರಪನಹಳ್ಳಿ ಮುಂಚೂಣಿಯಲ್ಲಿದೆ.
ಮುರಾರ್ಜಿ ವಸತಿ ಶಾಲೆಯಲ್ಲಿ ಎರಡು ಬ್ಲಾಕ್ ಕಟ್ಟಡ ಸಮುಚ್ಚಯ ನಿರ್ಮಿಸಲಾಗುವುದು. 6 ರಿಂದ 12 ನೇ ತರಗತಿ ವರೆಗೆ ಶಿಕ್ಷಣ ದೊರೆಯಲಿದೆ. ಶೇ. 75% ಅಲ್ಪಸಂಖ್ಯಾರಿಗೆ, ಹಾಗೂ ಉಳಿದ 25% ಇತರರಿಗೆ ಸೀಟು ಹಂಚಿಕೆ ಆಗಲಿದೆ. 18ಜನ ಶಿಕ್ಷಕರು ಸೇರಿದಂತೆ 24 ಸಿಬ್ಬಂದಿಗಳು ಇಲ್ಲಿ ಕಾರ್ಯನಿರ್ವಹಿಸಲಿದ್ದಾರೆ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಲೇಪಾಕ್ಷಪ್ಪ, ಅಂಜುಮನ್ ಮಾಜಿ ಅಧ್ಯಕ್ಷ ಸಿ.ಜಾಹೀದ್, ಮಹಬೂಬ್ ಸಾಹೇಬ್. ಮುಖಂಡರಾದ ಪದ್ಮರಾಜ ಜೈನ್, ಎಚ್.ಪದ್ಮಾನಾಭ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರಿದ್ದರು.
Leave a comment