Home ಸಿಎಂ ರಾಜೀನಾಮೆಗೆ ಒಪ್ಪಿಗೆ, ಡಿಸಿಎಂ ಪ್ರೀತಿಯ ಅಪ್ಪುಗೆ !
Homeರಾಜಕೀಯ

ಸಿಎಂ ರಾಜೀನಾಮೆಗೆ ಒಪ್ಪಿಗೆ, ಡಿಸಿಎಂ ಪ್ರೀತಿಯ ಅಪ್ಪುಗೆ !

Share
Share

ಬೆಂಗಳೂರು: ಕಾಂಗ್ರೆಸ್ ವರಿಷ್ಠರು ಹಾಗೂ ರಾಹುಲ್ ಗಾಂಧಿ ಅವರ ಸೂಚನೆ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಮಹತ್ವದ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಬೆಳಿಗ್ಗೆ ಸಚಿವರೊಂದಿಗೆ ನಡೆದ ಉಪಾಹಾರ ಕೂಟದಲ್ಲಿ (ಬ್ರೇಕ್‌ಫಾಸ್ಟ್ ಮೀಟಿಂಗ್) ಅವರು ಈ ವಿಷಯವನ್ನು ಅಧಿಕೃತವಾಗಿ ತಿಳಿಸಿದ್ದಾರೆ.

ಪಾದಮುಟ್ಟಿ ನಮಸ್ಕರಿಸಿದ ಡಿಸಿಎಂ
ಸಿದ್ದರಾಮಯ್ಯ ಅವರು ರಾಜೀನಾಮೆ ನಿರ್ಧಾರ ಪ್ರಕಟಿಸಿದ್ದಾರೆ. ಅದರ ಬೆನ್ನಲ್ಲೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಗಳ ಪಾದ ಮುಟ್ಟಿ ನಮಸ್ಕರಿಸಿ, ಆಲಿಂಗನ ಮಾಡಿಕೊಂಡರು. ಈ ಭಾವನಾತ್ಮಕ ಕ್ಷಣವು, ರಾಜ್ಯದ ಮುಂದಿನ ಮುಖ್ಯಮಂತ್ರಿ ತಾವೇ ಎಂಬ ಸ್ಪಷ್ಟ ಸಂದೇಶವನ್ನು ರವಾನಿಸಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಇದೇ ವೇಳೆ, ಡಿ.ಕೆ. ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೂ ರಾಜೀನಾಮೆ ಸಲ್ಲಿಸುವ ಸಾಧ್ಯತೆಯಿದೆ. ಹೈಕಮಾಂಡ್ ಶೀಘ್ರದಲ್ಲೇ ರಾಜ್ಯದ ನೂತನ ಮುಖ್ಯಮಂತ್ರಿ ಹಾಗೂ ನೂತನ ಕೆಪಿಸಿಸಿ ಅಧ್ಯಕ್ಷರ ಹೆಸರನ್ನು ಏಕಕಾಲದಲ್ಲಿ ಘೋಷಣೆ ಮಾಡುವ ನಿರೀಕ್ಷೆಯಿದೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಜೂ.18 ರಂದು ಪರಿಶಿಷ್ಟ ಜಾತಿ ಜನಾಂಗದವರ ಕುಂದು-ಕೊರತೆ ಆಲಿಕೆ ಸಭೆ

ಬಳ್ಳಾರಿ : ಜಿಲ್ಲೆಯ ಪರಿಶಿಷ್ಟ ಜಾತಿ ಜನಾಂಗದವರ ಸಮಸ್ಯೆಗಳನ್ನು ಆಲಿಸಿ, ಪರಿಹರಿಸಲು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ...

ಹರಪನಹಳ್ಳಿ ಪೊಲೀಸ್‌
Homeಸುದ್ದಿಗಳು

ಹರಪನಹಳ್ಳಿಯಲ್ಲಿ ಪೊಲೀಸರ ‘ಕಾಲ್ನಡಿಗೆ ಗಸ್ತು’

ಹರಪನಹಳ್ಳಿ : ನಗರದಲ್ಲಿ ಅಪರಾಧ ಪ್ರಕರಣಗಳಿಗೆ ಬ್ರೇಕ್ ಹಾಕಲು ನಮ್ಮ ಪೊಲೀಸ್ ಇಲಾಖೆ ಒಂದು ಸೂಪರ್...

Homeಶಿಕ್ಷಣ

ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಜಾಥ: ರಾರಾಜಿಸಿದ ಜಾಗೃತಿ ಫಲಕಗಳು

ಶಿಕ್ಷಣ ಪ್ರತಿಯೊಬ್ಬ ಮಗುವಿನ ಮೂಲಭೂತ ಹಕ್ಕು: ನ್ಯಾ.ಸಿದ್ದಲಿಂಗ ಪ್ರಭು ಬಳ್ಳಾರಿ : ಹೆಣ್ಣಾಗಲಿ ಅಥವಾ ಗಂಡಾಗಲಿ, ಪ್ರತಿಯೊಬ್ಬ...

Homeಶಿಕ್ಷಣ

ಜೂನ್ 12 ರಂದು ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ

ವಿಜಯನಗರ (ಹೊಸಪೇಟೆ) (ಕರ್ನಾಟಕ ವಾರ್ತೆ) ಜೂನ್.11: ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಕಾನೂನು ಸೇವಾ ಪ್ರಾಧಿಕಾರ, ಕಾರ್ಮಿಕ ಇಲಾಖೆ,...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.