Home ಹರಪನಹಳ್ಳಿ ಸುದ್ದಿ

ಹರಪನಹಳ್ಳಿ ಸುದ್ದಿ

20 Articles
nivrutta
Homeಕಲೆಕ್ರೀಡೆಶಿಕ್ಷಣ

ನೌಕರರ ಹಿತರಕ್ಷಣೆಗೆ ಸಂಘ ಸದಾ ಬದ್ಧ: ಎನ್.ಜಿ. ಮನೋಹರ ಭರವಸೆ

ಹರಪನಹಳ್ಳಿ: "ಸರ್ಕಾರಿ ನೌಕರರಿಗೆ ಯಾವುದೇ ರೀತಿಯ ಸಮಸ್ಯೆಗಳು ಎದುರಾಗದಂತೆ ನೋಡಿಕೊಳ್ಳಲು ರಾಜ್ಯ ನೌಕರರ ಸಂಘ ಹಾಗೂ ತಾಲೂಕು ಘಟಕವು ಸದಾ ನಿಮ್ಮ ಬೆನ್ನೆಲುಬಾಗಿ ನಿಲ್ಲಲಿದೆ" ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷರಾದ ಎನ್.ಜಿ. ಮನೋಹರ ಅವರು ಭರವಸೆ ನೀಡಿದರು. ಇಲ್ಲಿನ ಸರ್ಕಾರಿ ನೌಕರರ ಸಂಘದ ಸಭಾಂಗಣದಲ್ಲಿ ಭಾನುವಾರ ತಾಲೂಕು ಘಟಕದ ವತಿಯಿಂದ ಆಯೋಜಿಸಲಾಗಿದ್ದ ವಿವಿಧ ಇಲಾಖೆಗಳ ನಿವೃತ್ತ ನೌಕರರು, ನಿವೃತ್ತ ಶಿಕ್ಷಕರು ಹಾಗೂ ಬಡ್ತಿ ಹೊಂದಿದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸನ್ಮಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. "ಶಿಕ್ಷಕರು ವೃತ್ತಿಯಿಂದ ನಿವೃತ್ತರಾಗುತ್ತಿದ್ದಾರೆಯೇ ವಿನಃ ಅವರ ಅನುಭವದಿಂದಲ್ಲ. ನಿವೃತ್ತಿಯ ನಂತರವೂ ನಾವು ಮತ್ತು ನಿವೃತ್ತ ನೌಕರರ ಸಂಘ ಸದಾ ನಿಮ್ಮ ಜೊತೆಗಿರುತ್ತೇವೆ. ನಿವೃತ್ತ ಜೀವನದಲ್ಲಿ ಪ್ರತಿಯೊಬ್ಬರೂ ಪ್ರತಿದಿನ ವ್ಯಾಯಾಮ, ಪುಸ್ತಕ ಓದುವುದು, ತೋಟಗಾರಿಕೆ, ಸಂಗೀತ, ಕಲೆ, ಯೋಗ ಅಥವಾ ವಾಕಿಂಗ್ ಮಾಡುವ ಮೂಲಕ ತಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಉತ್ತಮವಾಗಿ ಕಾಪಾಡಿಕೊಳ್ಳಬೇಕು" ಎಂದು ಮನೋಹರ ಅವರು ಕಿವಿಮಾತು ಹೇಳಿದರು. ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಜಿಲ್ಲಾಧ್ಯಕ್ಷೆ ಲತಾ ಟಿ.ಎಚ್.ಎಂ ಮಾತನಾಡಿ, "ಮಹಿಳಾ ನೌಕರರಿಗೆ ಋತುಚಕ್ರದ ರಜೆ ಘೋಷಿಸುವಂತೆ ಸರ್ಕಾರಕ್ಕೆ ನಮ್ಮ ಸಂಘಟನೆಯು ಮೊದಲೇ ಧ್ವನಿಗೂಡಿಸಿ ಒತ್ತಾಯಿಸಿತ್ತು. ಹರಪನಹಳ್ಳಿ ತಾಲೂಕಿನಲ್ಲಿ ಈ ಹಿಂದೆ ನೌಕರರ ಪರವಾಗಿ ಇಂತಹ ಸಕ್ರಿಯ ಕಾರ್ಯಕ್ರಮಗಳು ನಡೆದಿರಲಿಲ್ಲ. ಆದರೆ ಪ್ರಸ್ತುತ ಅಧ್ಯಕ್ಷರಾದ ಮನೋಹರ್ ಅವರು ಹತ್ತಾರು ಜನಪರ ಕಾರ್ಯಕ್ರಮಗಳ ಮೂಲಕ ತಾಲೂಕು ಸಂಘಟನೆಯನ್ನು ಇಡೀ ರಾಜ್ಯಕ್ಕೆ ಮಾದರಿಯಾಗಿಸಿದ್ದಾರೆ. ಸಂಘಟನೆಗಳು ವೃತ್ತಿಯ ಜೊತೆಗೆ ಪ್ರವೃತ್ತಿಯಾಗಬೇಕೇ ಹೊರತು, ಸಂಘಟನೆಯೇ ವೃತ್ತಿಯಾಗಬಾರದು. ನಾವೆಲ್ಲರೂ ಸೇರಿ ತಾಲೂಕಿನ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸಿ, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಶ್ರಮಿಸೋಣ" ಎಂದರು. ಮಂಜುನಾಥ ಪೂಜಾರ್ ಅವರು ಮಾತನಾಡಿ, "ಶಾಲೆಗಳಲ್ಲಿ ೩೦ ವರ್ಷಗಳಿಗೂ ಹೆಚ್ಚು ಕಾಲ ಸುದೀರ್ಘ ಸೇವೆ ಸಲ್ಲಿಸಿ, ಸಾವಿರಾರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿರುವ ಶಿಕ್ಷಕರ ಸಮಯಪಾಲನೆ, ಕರ್ತವ್ಯ ನಿಷ್ಠೆ ಮತ್ತು ಮಕ್ಕಳೊಂದಿಗಿನ ಮಧುರ ಬಾಂಧವ್ಯ ನಿಜಕ್ಕೂ ಶ್ಲಾಘನೀಯ. ಇವರ ನಿವೃತ್ತ ಜೀವನ ಸುಖಕರವಾಗಿರಲಿ" ಎಂದು ಹಾರೈಸಿದರು. ಬಿಇಒ ಕಚೇರಿಯ ಇಸಿಒ ವೀರೇಶ್ ಮಾತನಾಡಿ, ನಿವೃತ್ತ ಹಾಗೂ ಬಡ್ತಿ ಪಡೆದ ಮುಖ್ಯ ಶಿಕ್ಷಕರನ್ನು ಕರೆಸಿ ಗೌರವಿಸುತ್ತಿರುವ ನೌಕರರ ಸಂಘದ ಕಾರ್ಯ ಸ್ತುತ್ಯರ್ಹ ಎಂದರು. ಶಿಕ್ಷಕ ಬಿ. ಆಂಜನೇಯ ಅವರೂ ಸಹ ವೇದಿಕೆಯಲ್ಲಿ ಅನಿಸಿಕೆಗಳನ್ನು ಹಂಚಿಕೊಂಡರು. ಇದೇ ವೇಳೆ ನಿವೃತ್ತ ಶಿಕ್ಷಕ ಸಲಾಂ ಅವರು "ಪ್ರೀತಿಯ ಗಾಳಿ ಬೀಸುತ್ತಿದೆ..." ಎಂಬ ಗೀತೆಯನ್ನು ಹಾಡಿ ನೆರೆದಿದ್ದವರನ್ನು ರಂಜಿಸಿದರು.  ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಷರೀಪ್ ಮಕರಬ್ಬಿ, ಸಂಘದ ಪ್ರಧಾನ ಕಾರ್ಯದರ್ಶಿ ಸೂರ್ಯನಾಯ್ಕ, ಗೌರವಾಧ್ಯಕ್ಷ ಎನ್‍.ಟಿ.ಸೋಮಪ್ಪ, ಜಿಲ್ಲಾ...

Homeಸುದ್ದಿಗಳು

ಕೋಟೆ ಅಂಜನೇಯ ದೇವಸ್ಥಾನ ಜಾಗ ಒತ್ತುವರಿ ತೆರವುಗೊಳಿಸದಿದ್ದರೆ ಹೋರಾಟದ ಎಚ್ಚರಿಕೆ

ಹರಪನಹಳ್ಳಿ (ವಿಜಯನಗರ ಜಿಲ್ಲೆ ) : ಪಾಳೆಗಾರ ರಾಜಸೋಮಶೇಖರ ನಾಯಕರ ಕಾಲದ ನಿರ್ಮಾಣವಾದ ಕೋಟೆ ಅಂಜನೇಯ ಸ್ವಾಮಿ ದೇವಸ್ಥಾನಕ್ಕೆ ಮುಜರಾಯಿ ಇಲಾಖೆ ಆಡಳಿತಾಧಿಕಾರಿ ನೇಮಿಸಲು ದೇವಸ್ಥಾನ ಸಮಿತಿ ಅವಕಾಶ ಕೊಡುವುದಿಲ್ಲ ಎಂದು...

shri ganda
ಅಪರಾಧ

ಯರಬಾಳು : ಶ್ರೀಗಂಧದ ಮರ ಕಳವು

ಹರಪನಹಳ್ಳಿ: ತಾಲ್ಲೂಕಿನ ತೆಲಿಗಿ ಹೋಬಳಿಯ ಯರಬಾಳು ಗ್ರಾಮದ ರೈತರೊಬ್ಬರ ತೋಟದಲ್ಲಿ ಸುಮಾರು 20 ವರ್ಷಗಳಿಂದ ಬೆಳೆಸಲಾಗಿದ್ದ ಬೃಹತ್ ಶ್ರೀಗಂಧದ ಮರವನ್ನು ಭಾನುವಾರ ತಡರಾತ್ರಿ ಕಳ್ಳರು ಕತ್ತರಿಸಿಕೊಂಡು ಹೋಗಿರುವ ಘಟನೆ ಜರುಗಿದೆ. ಗ್ರಾಮದ...

ಪತ್ರಕರ್ತ ಕೆ. ಉಚ್ಚೆಂಗೆಪ್ಪ
Homeಸುದ್ದಿಗಳು

ಪತ್ರಕರ್ತ ಕೆ. ಉಚ್ಚೆಂಗೆಪ್ಪ ಅವರಿಗೆ ‘ಆರ್ಯಭಟ ಅಂತರರಾಷ್ಟ್ರೀಯ ಪ್ರಶಸ್ತಿ’

ಹರಪನಹಳ್ಳಿ :  ಹಿರಿಯ ಪತ್ರಕರ್ತ ಹಾಗೂ ನ್ಯಾಯವಾದಿ ಕೆ. ಉಚ್ಚೆಂಗೆಪ್ಪ ಅವರ ಮೂರು ದಶಕಗಳ ಮಾಧ್ಯಮ ಹಾಗೂ ಸಮಾಜ ಸೇವೆಯನ್ನು ಗುರುತಿಸಿ, ಬೆಂಗಳೂರಿನ ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯು 51ನೇ ವರ್ಷದ ಪ್ರತಿಷ್ಠಿತ...

medical shop harapanahalli
ಸುದ್ದಿಗಳು

ಹರಪನಹಳ್ಳಿಯಲ್ಲಿ ಔಷಧಿ ಅಂಗಡಿಗಳು ಬಂದ್ ಮಾಡಿ ಮುಷ್ಕರ

ಹರಪನಹಳ್ಳಿ: ಅನ್‍ಲೈನ್‌ನಲ್ಲಿ ನಿಯಮ ಬಾಹಿರವಾಗಿ ಔಷಧಿ ಮಾರಾಟ ಮಾಡುತ್ತಿರುವ ಇ-ಫಾರ್ಮಸಿ ಜಾಲದ ವಿರುದ್ಧ ದೇಶಾದ್ಯಂತ ಕರೆ ನೀಡಿರುವ ಔಷಧಿ ವ್ಯಾಪಾರ ಬಂದ್  ಬೆಂಬಲಿಸಿ ಹರಪನಹಳ್ಳಿ ತಾಲ್ಲೂಕು ಔಷಧ ವ್ಯಾಪಾರಿಗಳ ಸಂಘ ಬುಧವಾರ ಔಷಧ...

ravi
Homeಅಪರಾಧ

 ಶೃಂಗಾರತೋಟದಲ್ಲಿ ರೈತ ರವಿ ಆತ್ಮಹತ್ಯೆ  

ಹರಪನಹಳ್ಳಿ: ತಾಲ್ಲೂಕಿನ ಶೃಂಗಾರತೋಟ ನಿವಾಸಿಯಾಗಿದ್ದ ರೈತನೊಬ್ಬ ಸಾಲಬಾಧೆ ಹಾಗೂ ಬೆಳೆ ನಷ್ಟದಿಂದ ಮನನೊಂದು ತಮ್ಮ ಜಮೀನಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಅಲಬೂರು ರವಿ (55) ಆತ್ಮಹತ್ಯೆ ಮಾಡಿಕೊಂಡ...

ಶಿಕ್ಷಣಸುದ್ದಿಗಳು

ವಸತಿ ಕಾಲೇಜು ಪ್ರವೇಶ: ಒಳಮೀಸಲಾತಿ ಕೈಬಿಟ್ಟಿದ್ದಕ್ಕೆ ಆಕ್ರೋಶ

ಹರಪನಹಳ್ಳಿ :   ಪರಿಶಿಷ್ಟ ಸಮುದಾಯಗಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಒಳಮೀಸಲಾತಿಗೆ ಕಲ್ಪಿಸುವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ ಆದರೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (ಕ್ರೈಸ್) ಅಡಿಯಲ್ಲಿ ಪಿಯುಸಿ ದಾಖಲಾತಿಗೆ...

SSLC Results 2026, ಎಸ್ಸೆಸ್ಸೆಲ್ಸಿ ಫಲಿತಾಂಶ,
ಶಿಕ್ಷಣ

  ಹರಪನಹಳ್ಳಿ ಜಿಲ್ಲೆಗೆ 3ನೇ ಸ್ಥಾನ; ಬಿಇಒ ಲೇಪಾಕ್ಷಪ್ಪ ಅವರಿಗೆ ಸನ್ಮಾನ

ಹರಪನಹಳ್ಳಿ: 2025-26ನೇ ಸಾಲಿನ ಎಸ್.ಎಸ್‍.ಎಲ್‍.ಸಿ. ಫಲಿತಾಂಶದಲ್ಲಿ ತಾಲ್ಲೂಕನ್ನು ಜಿಲ್ಲಾ ಮಟ್ಟದಲ್ಲಿ ಮೂರನೇ ಸ್ಥಾನಕ್ಕೆ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರ ವಹಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ಲೇಪಾಕ್ಷಪ್ಪ ಅವರನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ...

arsikere
ಸುದ್ದಿಗಳು

ಕೋಲಶಾಂತೇಶ್ವರ ಸ್ವಾಮೀಜಿ ನಡೆದಾಡುವ ದೇವರು : ಡಾ.ಪ್ರಭಾ ಮಲ್ಲಿಕಾರ್ಜುನ್

ಹರಪನಹಳ್ಳಿ: ಬಸವೇಶ್ವರರಂತೆ ಶಾಂತಲಿಂಗ ದೇಶೀಕೇಂದ್ರ ಮಹಾಸ್ವಾಮಿಗಳು ಕಾಯಕ ಯೋಗಿಗಳು ಹಾಗೂ ನಡೆದಾಡುವ ದೇವರಾಗಿದ್ದಾರೆ ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಬಣ್ಣಿಸಿದರು. ತಾಲೂಕಿನ ಅರಸೀಕೆರೆ ಗ್ರಾಮದ ಕೋಲ ಶಾಂತೇಶ್ವರ ಮಠದಲ್ಲಿ ಬಸವ ಜಯಂತಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.