ದಾವಣಗೆರೆ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಗುರು ವಚನ ಸಂಗೀತ ಸಂಸ್ಥೆ, ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ಜೂನ್ 07 ರಂದು ಸಂಜೆ 5.00 ಗಂಟೆಗೆ ನಗರದ ವಿದ್ಯಾನಗರ ಉದ್ಯಾನವನದಲ್ಲಿ "ಕಲಾನಡಿಗೆ ನಿಮ್ಮ ಬಳಿಗೆ" ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಮಹತ್ವದ ಕಾರ್ಯಕ್ರಮದಲ್ಲಿ ಮಾನ್ಯ ಜನಪ್ರತಿನಿಧಿಗಳು ಭಾಗವಹಿಸಲಿದ್ದು, ದಾವಣಗೆರೆ ಜಿಲ್ಲೆಯ ಎಲ್ಲಾ ಮುಖಂಡರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹರಪನಹಳ್ಳಿ : ಇಲ್ಲಿಯ ಎಪಿಎಂಸಿ ಪ್ರಾಂಗಣದಲ್ಲಿ ನಡೆಯುತ್ತಿದ್ದ ಸರ್ಕಾರದ ಬೆಂಬಲ ಬೆಲೆ ರಾಗಿ ಖರೀದಿ ಕೇಂದ್ರದ ಏಜೆನ್ಸಿಯನ್ನು ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ಏಪ್ರಿಲ್ 9ರಂದು ರದ್ದುಪಡಿಸಿ, ರಾಗಿ ಖರೀದಿ ಸ್ಥಗಿತಗೊಳಿಸಿದ್ದನ್ನು...
ವಿಜಯನಗರ (ಹೊಸಪೇಟೆ), : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ರೈತರಿಗೆ ಉತ್ತಮ ಗುಣಮಟ್ಟದ ತರಕಾರಿ ಬೀಜ ವಿತರಣೆ ಮಾಡಲಾಗುತ್ತದೆ ಎಂದು ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಪಿ.ಜಿ.ಚಿದಾನಂದಪ್ಪ ತಿಳಿಸಿದ್ದಾರೆ. 2024-25...