ವಿಜಯನಗರ (ಹೊಸಪೇಟೆ) : ಊರಿನ ಸಾರ್ವಜನಿಕ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ತಮ್ಮ ಜಾಗ ಹಾಗೂ ಮನೆಗಳನ್ನು ಕಳೆದುಕೊಂಡು ತ್ಯಾಗ ಮಾಡಿದ ಗ್ರಾಮಸ್ಥರ ಋಣವನ್ನು ಎಂದಿಗೂ ತೀರಿಸಲು ಸಾಧ್ಯವಿಲ್ಲ ಶಾಸಕ...
ಹರಪನಹಳ್ಳಿ : ನಕಲಿ ದಾಖಲೆ ಸೃಷ್ಟಿಸಿಕೊಂಡು ತನ್ನ ಹೆಸರಿಗೆ ಆಸ್ತಿ ಪತ್ರಗಳನ್ನು ಮಾಡಿಕೊಂಡು ಪರಾರಿಯಾಗಿದ್ದ 12 ವರ್ಷ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಖಾಸಿಂಪೀರ್ ತಂದೆ ಇಮಾಮಸಾಬ್ ಮೂಲಿಮನಿ (63) ಬಂಧಿತ...
ವಿಜಯನಗರ (ಹೊಸಪೇಟೆ) : ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಮರಣ ಹೊಂದಿದ ಫಲಾನುಭವಿಗಳನ್ನು ಪತ್ತೆ ಹಚ್ಚಿ, ಅವರ ಖಾತೆಗಳಿಗೆ ನಿಯಮಾನುಸಾರ ಜಮೆಯಾಗಿರುವ ಅನುದಾನವನ್ನು ತಕ್ಷಣವೇ ತಡೆಯಲು...
ವಿಜಯನಗರ(ಹೊಸಪೇಟೆ) :ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಇದೇ ಜುಲೈ 15 ರಂದು ಬೆಳಿಗ್ಗೆ 11: 30ಕ್ಕೆ ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಾಡ ಪ್ರಭು ಕೆಂಪೇಗೌಡ...
ವಿಜಯನಗರ (ಹೊಸಪೇಟೆ) : ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬಾಕಿ ಇರುವ ಎಫ್.ಎಸ್.ಟಿ.ಪಿ ಮತ್ತು ಎಸ್.ಟಿ.ಪಿ ಕಾಮಗಾರಿಗಳನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ತಿಳಿಸಿದರು. ನಗರದ...
ಹರಪನಹಳ್ಳಿ : ವಿಶೇಷಚೇತನ ಮಕ್ಕಳನ್ನು ಸಮಾಜದ ಮುಖ್ಯವಾಹಿನಿಗೆ ತರುವುದು ಮತ್ತು ಅವರಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವುದು ನಮ್ಮೆಲ್ಲರ ಆದ್ಯ ಜವಾಬ್ದಾರಿಯಾಗಿದೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವೈ.ಎಚ್. ಚಂದ್ರಶೇಖರ ಅಭಿಪ್ರಾಯಪಟ್ಟರು. ತಾಲ್ಲೂಕಿನ...
ಹರಪನಹಳ್ಳಿ : ರಾಜಕೀಯ ಪ್ರಜಾಪ್ರಭುತ್ವ ದುರ್ಬಳಕೆ ಆಗುತ್ತಿದೆ, ಸಾಮಾಜಿಕ ಮತ್ತು ಸಾಂಸ್ಕೃತಿಕ ಕ್ಷೇತ್ರ ಜಾತಿ ಮೇಲೆ ನಿಂತಿರುವ ಪ್ರಸ್ತುತ ದಿನಗಳಲ್ಲಿ ಮನುಷ್ಯ ಪ್ರೀತಿಸುವ ಸಮಾಜ ಕಟ್ಟುವ ಅಗತ್ಯವಿದೆ ಎಂದು ಬಂಡಾಯ ಸಾಹಿತಿ...
ಹರಪನಹಳ್ಳಿ: ತಾಲ್ಲೂಕಿನ ಮಾಚಿಹಳ್ಳಿ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಮುಖಂಡರ ಸಭೆಯಲ್ಲಿ, ತಾಲ್ಲೂಕು ಯಾದವ (ಗೊಲ್ಲರ) ಸಮಾಜ ಸಂಘದ ನೂತನ ಪದಾಧಿಕಾರಿಗಳನ್ನು ಒಮ್ಮತದಿಂದ ಆಯ್ಕೆ ಮಾಡಲಾಯಿತು. ಸಂಘದ ನೂತನ ಅಧ್ಯಕ್ಷರಾಗಿ ಗುರುಶಾಂತನಹಳ್ಳಿಯ ನಿವೃತ್ತ...
ಹರಪನಹಳ್ಳಿ : ನಾಟಿ ವೈದ್ಯರನ್ನು ಸರ್ಕಾರಿ ಆಯುಷ್ (AYUSH) ವಿಭಾಗದಡಿ ಸೇರಿಸಿ, ಅವರಿಗೆ ಅಧಿಕೃತ 'ರಾಷ್ಟ್ರೀಯ ನೋಂದಣಿ ಸಂಖ್ಯೆ' ಹಾಗೂ 'ಗುರುತಿನ ಚೀಟಿ' ನೀಡಬೇಕು ಎಂದು ಆಗ್ರಹಿಸಿ ಇಲ್ಲಿಯ ಪಾರಂಪರಿಕ ನಾಟಿ ವೈದ್ಯರ ಸಂಘ ಪ್ರಧಾನಿ ನರೇಂದ್ರಮೋದಿ ಅವರಿಗೆ ಪತ್ರ ಚಳವಳಿಗೆ ಶನಿವಾರ ಚಾಲನೆ ನೀಡಿದ್ದಾರೆ. ಕರ್ನಾಟಕದ ಸಾಂಪ್ರದಾಯಿಕ ನಾಟಿ ವೈದ್ಯರು ತಮಗೆ ಸರ್ಕಾರದಿಂದ ಅಧಿಕೃತ ಮಾನ್ಯತೆ ನೀಡುವಂತೆ ಆಗ್ರಹಿಸಿ ನೇರವಾಗಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರಿಗೆ ಮನವಿ ಪತ್ರವೊಂದನ್ನು ಸಲ್ಲಿಸಿದ್ದಾರೆ. ಕರೋನಾ ಮಹಾಮಾರಿ ಇಡೀ ದೇಶವನ್ನೇ ಕಾಡಿದ ಸಂದರ್ಭದಲ್ಲಿ, ಹಳ್ಳಿಗಳಲ್ಲಿ ಉಚಿತವಾಗಿ ಕಷಾಯ ವಿತರಿಸುವ ಮೂಲಕ ರೋಗ ನಿಯಂತ್ರಣದಲ್ಲಿ ನಮ್ಮ ನಾಟಿ ವೈದ್ಯರು ಪ್ರಮುಖ ಪಾತ್ರ ವಹಿಸಿದ್ದರು. ಇಂದಿಗೂ ಅನೇಕ ದೀರ್ಘಕಾಲದ ಕಾಯಿಲೆಗಳಿಗೆ, ಮನುಷ್ಯರಿಗೆ ಮಾತ್ರವಲ್ಲದೆ ಜಾನುವಾರುಗಳಿಗೂ ಗಿಡಮೂಲಿಕೆಗಳ ಮೂಲಕ ಯಶಸ್ವಿಯಾಗಿ ಚಿಕಿತ್ಸೆ ನೀಡುತ್ತಿದ್ದಾರೆ. ನಾಟಿ ವೈದ್ಯರಿಗೆ ಯಾವುದೇ ಸರ್ಕಾರಿ ಮಾನ್ಯತೆ ಇಲ್ಲದಿರುವುದರಿಂದ ಅವರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ನಮ್ಮ ಸಾಂಪ್ರದಾಯಿಕ ವೈದ್ಯಕೀಯ ಪದ್ಧತಿಗಳ ಸಂಶೋಧನೆ ಹಾಗೂ ಅಭಿವೃದ್ಧಿಗೆ ಸರ್ಕಾರವು ನೆರವು ನೀಡಬೇಕು. ನಾಟಿ ವೈದ್ಯಕೀಯದಲ್ಲಿ ಜ್ಞಾನ ಮತ್ತು ಅರ್ಹತೆ ಹೊಂದಿರುವ ವ್ಯಕ್ತಿಗಳಿಗೆ ಸರ್ಕಾರದಿಂದಲೇ ಅಧಿಕೃತ ಪ್ರಮಾಣಪತ್ರ (ಸರ್ಟಿಫಿಕೇಟ್) ನೀಡುವ ವ್ಯವಸ್ಥೆಯಾಗಬೇಕು....