ಹೊಸಪೇಟೆ: ನಗರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಒಳಾಂಗಣ ಕ್ರೀಡಾಂಗಣದ ಸಭಾಂಗಣದಲ್ಲಿ ಶನಿವಾರ (ಮೇ 30) ಬೆಳಿಗ್ಗೆ 9.30ಕ್ಕೆ ಅಧಿಕಾರಿಗಳಿಗಾಗಿ ‘ಮಾಹಿತಿ ಹಕ್ಕು ಕಾಯ್ದೆ’ (ಆರ್ಟಿಐ) ಕುರಿತು ಬೃಹತ್ ಕಾರ್ಯಾಗಾರ ಹಾಗೂ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿದೆ.ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠದ ರಾಜ್ಯ ಮಾಹಿತಿ ಆಯುಕ್ತ ಬಿ. ವೆಂಕಟಸಿಂಗ್, ಬೆಂಗಳೂರು ಪೀಠದ ರಾಜ್ಯ ಮಾಹಿತಿ ಆಯುಕ್ತ ಕೆ. ಬದ್ರುದ್ದೀನ ಹಾಗೂ ಡಾ. ಹರೀಶಕುಮಾರ ಅವರು ಈ ಮಹತ್ವದ ಕಾರ್ಯಾಗಾರದಲ್ಲಿ ಭಾಗವಹಿಸಲಿದ್ದು, ಮಾಹಿತಿ ಹಕ್ಕು ಕಾಯ್ದೆಯ ಅನುಷ್ಠಾನ ಮತ್ತು ಸವಾಲುಗಳ ಕುರಿತು ಅಧಿಕಾರಿಗಳೊಂದಿಗೆ ನೇರ ಸಂವಾದ ನಡೆಸಲಿದ್ದಾರೆ.ಜಿಲ್ಲೆಯ ಎಲ್ಲ ಇಲಾಖೆಗಳ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ), ಗ್ರಾಮ ಪಂಚಾಯ್ತಿ ಕಾರ್ಯದರ್ಶಿಗಳು ಹಾಗೂ ಸಾರ್ವಜನಿಕ ಮಾಹಿತಿ ಅಧಿಕಾರಿಗಳು ಈ ಕಾರ್ಯಾಗಾರದಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೊಸಪೇಟೆ (ವಿಜಯನಗರ): "ಮಕ್ಕಳು ಈ ದೇಶದ ಅಮೂಲ್ಯ ಆಸ್ತಿ. ಪೋಷಕರಿಗೆ ಬೇಡವಾದ ಅಥವಾ ಅನಾಥವಾಗಿ ಸಿಕ್ಕ ಮಕ್ಕಳನ್ನು ಎಲ್ಲೆಂದರಲ್ಲಿ ಬಿಟ್ಟು ಅವರ ಜೀವದ ಜೊತೆ ಚೆಲ್ಲಾಟವಾಡಬೇಡಿ. ಅಂತಹ ಮಕ್ಕಳನ್ನು ಸರ್ಕಾರದ ವಿಶೇಷ...
ಹರಪನಹಳ್ಳಿ: ‘ಗ್ರಾಮೀಣ ಕಲಾವಿದರು ಎಂದರೆ ಹಳ್ಳಿಯ ನಾಡಿಮಿಡಿತವಿದ್ದಂತೆ. ಕಲೆ, ಸಾಹಿತ್ಯ, ಸಂಗೀತ ಮತ್ತು ನಾಟಕಗಳು ಕೇವಲ ಪುಸ್ತಕಕ್ಕೆ ಸೀಮಿತವಲ್ಲ; ಅವು ಕಲಾವಿದರ ಬದುಕಿನ ಅವಿಭಾಜ್ಯ ಅಂಗಗಳಾಗಿವೆ’ ಎಂದು ಅಖಿಲ ಭಾರತ ಕಿಸಾನ್...
ಹರಪನಹಳ್ಳಿ: ‘ಇಂದಿನ ದಿನಗಳಲ್ಲಿ ಮದುವೆಗಳು ಸರಳತೆಯ ಬದಲು ಆಡಂಬರಕ್ಕೆ ಹೆಚ್ಚು ಒತ್ತು ನೀಡುತ್ತಿದ್ದು, ಇದು ದುಂದುವೆಚ್ಚಕ್ಕೆ ದಾರಿ ಮಾಡಿಕೊಡುತ್ತಿದೆ. ಇಂತಹ ಅದ್ದೂರಿತನಕ್ಕೆ ಕಡಿವಾಣ ಬೀಳಬೇಕಿದೆ’ ಎಂದು ತೆಗ್ಗಿನಮಠ ಸಂಸ್ಥಾನದ ಪೀಠಾಧ್ಯಕ್ಷರಾದ ವರಸದ್ಯೋಜಾತ...
ಹರಪನಹಳ್ಳಿ: ‘ದಾನಧರ್ಮ ಮಾಡುವುದು ಇಸ್ಲಾಂ ಧರ್ಮದ ಪ್ರಮುಖ ತತ್ವಗಳಲ್ಲಿ ಒಂದಾಗಿದೆ. ಆರ್ಥಿಕವಾಗಿ ಹಿಂದುಳಿದವರಿಗೆ ಮತ್ತು ಅರ್ಹರಿಗೆ ಸಹಾಯ ಮಾಡುವಲ್ಲಿ ನಾವು ಎಂದಿಗೂ ಹಿಂದೆ ಸರಿಯಬಾರದು’ ಎಂದು ಕರ್ನಾಟಕ ರಾಜ್ಯ ಸರ್ಕಾರಿ ಮುಸ್ಲಿಂ...
ವಿಜಯನಗರ (ಹೊಸಪೇಟೆ): ಭಾರತೀಯ ಸೇನೆ ಹಾಗೂ ಯುನಿಫಾರ್ಮ್ ಸೇವೆಗಳಿಗೆ ಸೇರಬಯಸುವ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಆಯ್ಕೆ ಪೂರ್ವ ಸಿದ್ಧತೆಗಾಗಿ ಉಚಿತ ವೃತ್ತಿ ಮಾರ್ಗದರ್ಶನ ಮತ್ತು ತರಬೇತಿ ನೀಡಲು ಹಿಂದುಳಿದ ವರ್ಗಗಳ ಕಲ್ಯಾಣ...
ವಿಜಯನಗರ (ಹೊಸಪೇಟೆ): ಮೈಸೂರು ವಿಶ್ವವಿದ್ಯಾನಿಲಯದ ಸಂಯೋಜನೆಗೆ ಒಳಪಟ್ಟಿರುವ ಸಿದ್ದಾರ್ಥನಗರದ 'ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿನಲ್ಲಿ' (ಕಾವಾ), 2026-27ನೇ ಸಾಲಿನ ಪ್ರಥಮ ವರ್ಷದ ಬಿ.ವಿ.ಎ (B.V.A.) ಪದವಿ ಪ್ರವೇಶಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹತೆ:...
ವಿಜಯನಗರ (ಹೊಸಪೇಟೆ): ತುಂಗಭದ್ರಾ ಜಲಾಶಯದ ಬಹುನಿರೀಕ್ಷಿತ ಕ್ರೆಸ್ಟ್ ಗೇಟ್ ಅಳವಡಿಕೆ ಕಾರ್ಯವು ಯುದ್ಧೋಪಾದಿಯಲ್ಲಿ ಸಾಗುತ್ತಿದ್ದು, ಮೇ ಅಂತ್ಯದ ವೇಳೆಗೆ ಎಲ್ಲಾ 33 ನೂತನ ಗೇಟ್ಗಳ ಅಳವಡಿಕೆ ಪೂರ್ಣಗೊಳ್ಳಲಿದೆ ಎಂದು ಸಣ್ಣ ನೀರಾವರಿ...
ಅಪಘಾತವೆಂದು ನಂಬಿಸಲು ಯತ್ನಿಸಿದ ಇಬ್ಬರ ಬಂಧನ ಹರಪನಹಳ್ಳಿ (ವಿಜಯನಗರ ಜಿಲ್ಲೆ ): ಆಸ್ತಿ ಪಾಲಿಗಾಗಿ ಹೆತ್ತ ಅಣ್ಣನನ್ನೇ ತಮ್ಮ ಮತ್ತು ಆತನ ಸ್ನೇಹಿತ ಸೇರಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ವಿಜಯನಗರ...