Home ಟಾಟಾ ಪವರ್‌ಗೆ ಸಮಾನಾಂತರ ವಿದ್ಯುತ್ ವಿತರಣೆ ಪರವಾನಗಿ ಕಿಸಾನ್ ಸಭಾ ವಿರೋಧ :
Homeಸುದ್ದಿಗಳು

ಟಾಟಾ ಪವರ್‌ಗೆ ಸಮಾನಾಂತರ ವಿದ್ಯುತ್ ವಿತರಣೆ ಪರವಾನಗಿ ಕಿಸಾನ್ ಸಭಾ ವಿರೋಧ :

Share
Share

ಹರಪನಹಳ್ಳಿ: ರಾಜ್ಯದಲ್ಲಿ ಸಮಾನಾಂತರ ವಿದ್ಯುತ್ ವಿತರಣೆಗಾಗಿ ಮೆ. ಟಾಟಾ ಪವರ್ ಕಂಪನಿ ಲಿಮಿಟೆಡ್‌ಗೆ ಪರವಾನಗಿ ನೀಡಲು ಮುಂದಾಗಿರುವುದನ್ನು ಅಖಿಲ ಭಾರತ ಕಿಸಾನ್ ಸಭಾ ತೀವ್ರವಾಗಿ ಖಂಡಿಸಿದೆ. ಈ ಕುರಿತು ಆಕ್ಷೇಪಣೆ ವ್ಯಕ್ತಪಡಿಸಿ ಪತ್ರಿಕಾ ಪ್ರಕಟಣೆ ನೀಡಿರುವ ಸಂಘಟನೆಯ ಜಿಲ್ಲಾಧ್ಯಕ್ಷ ಗುಡಿಹಳ್ಳಿ ಹಾಲೇಶ, “ಸಾವಿರಾರು ಕೋಟಿ ರೂಪಾಯಿಗಳ ಸಾರ್ವಜನಿಕ ಹೂಡಿಕೆಯಿಂದ ನಿರ್ಮಾಣಗೊಂಡಿರುವ ವಿದ್ಯುತ್ವಿತರಣಾ ಜಾಲವನ್ನು ಕಡೆಗಣಿಸಿ, ಖಾಸಗಿ ಕಂಪನಿಗೆ ಸಮಾನಾಂತರ ಜಾಲ ನಿರ್ಮಿಸಲು ಅವಕಾಶ ನೀಡುವುದು ಸಾರ್ವಜನಿಕ ಸಂಪನ್ಮೂಲಗಳ ಪೋಲಿಗೆ ಕಾರಣವಾಗಲಿದೆ” ಎಂದು ಎಚ್ಚರಿಸಿದ್ದಾರೆ.

ರಾಜ್ಯ, ಕೇಂದ್ರ ಸರ್ಕಾರಗಳು ಹಾಗೂ ಗ್ರಾಹಕರ ಹಣದಿಂದ ದಶಕಗಳ ಕಾಲ ಶ್ರಮಿಸಿ ಕಟ್ಟಿರುವ ಉಪಕೇಂದ್ರಗಳು, ವಿತರಣಾ ಮಾರ್ಗಗಳು ಮತ್ತು ಟ್ರಾನ್ಸ್‌ಫಾರ್ಮರ್‌ಗಳ ಬಳಕೆ ಇದರಿಂದ ಕಡಿಮೆಯಾಗಲಿದೆ. ಅಲ್ಲದೆ, ರಾಜ್ಯ ಸ್ವಾಮ್ಯದ ಎಸ್ಕಾಂಗಳ ಆರ್ಥಿಕ ಸ್ಥಿರತೆಗೆ ಭಾರೀ ಪೆಟ್ಟು ಬೀಳಲಿದ್ದು, ರೈತರು ಹಾಗೂ ಗ್ರಾಮೀಣ ಗ್ರಾಹಕರಿಗೆ ಸಿಗುತ್ತಿರುವ ಕಲ್ಯಾಣ ಯೋಜನೆಗಳು ಮತ್ತು ಉದ್ಯೋಗಾವಕಾಶಗಳಿಗೂ ಕುತ್ತು ಬರಲಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಖಾಸಗಿ ಕಂಪನಿಗೆ ಪರವಾನಗಿ ನೀಡುವುದರಿಂದ ರಾಜ್ಯದ ವಿದ್ಯುತ್ ವಿತರಣಾ ವ್ಯವಸ್ಥೆಯ ದೀರ್ಘಕಾಲೀನ ಸ್ಥಿರತೆಯ ಮೇಲೆ ವ್ಯಾಪಕ ದುಷ್ಪರಿಣಾಮ ಉಂಟಾಗಲಿದೆ ಎಂದು ಹಗರಿಗುಡಿಹಳ್ಳಿ ಶಿವರಾಂ, ಹರಿಯಮ್ಮನಹಳ್ಳಿ ಬಸವರಾಜ, ಭೂಮ್ಮಲಿಂಗಪ್ಪ ಹಾಗೂ ರಾಗಿಮಸಲಡ ಹನುಮಂತಪ್ಪ ಮತ್ತಿತರರು ತೀವ್ರವಾಗಿ ವಿರೋಧಿಸಿದ್ದಾರೆ.

 

Share

Leave a comment

Leave a Reply

Your email address will not be published. Required fields are marked *

Related Articles
Homeಆರೋಗ್ಯ

ಪ್ರತಿಯೊಬ್ಬರೂ ಅರೋಗ್ಯವನ್ನು ಕಾಪಾಡಿಕೊಳ್ಳಿ : ವೈ.ಡಿ.ಲಕ್ಷ್ಮಿದೇವಿ ಅಣ್ಣಪ್ಪ.

ಹರಪನಹಳ್ಳಿ: ತಾಲೂಕಿನ ಅರಸೀಕೆರೆ ಗ್ರಾಮದ ಸಮುದಾಯ ಅರೋಗ್ಯ ಕೇಂದ್ರದಲ್ಲಿ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ವೈ.ಡಿ.ಅಣ್ಣಪ್ಪ ರವರ...

Home

ಹರಪನಹಳ್ಳಿ: ಸೇವಾನಗರ ಗ್ರಾಮಕ್ಕೆ ಬಸ್ ಸೌಲಭ್ಯ ಕಲ್ಪಿಸಲು ಆಗ್ರಹಿಸಿ ಎಐಎಸ್ಎ (AISA) ಪ್ರತಿಭಟನೆ

ಹರಪನಹಳ್ಳಿ: ತಾಲೂಕಿನ ಸೇವಾನಗರ ಗ್ರಾಮಕ್ಕೆ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ...

Homeಶಿಕ್ಷಣ

ಹರಪನಹಳ್ಳಿ: ಪಂಚಮಸಾಲಿ ನೌಕರರ ಸಂಘದ ಪ್ರತಿಭಾ ಪುರಸ್ಕಾರ ಜೂನ್ 28ಕ್ಕೆ ಮುಂದೂಡಿಕೆ

ಹರಪನಹಳ್ಳಿ : ತಾಲೂಕು ಪಂಚಮಸಾಲಿ ಲಿಂಗಾಯತ ನೌಕರರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ...

Homeಕೃಷಿ

ಕೃಷಿ ಕಾರ್ಮಿಕರ ಕೊರತೆಗೆ ಮುಕ್ತಿ: 

ಹರಪನಹಳ್ಳಿ: ಗ್ರಾಮೀಣ ಭಾಗದ ರೈತರು ವರ್ಷಗಳಿಂದ ಎದುರಿಸುತ್ತಿರುವ ಅತಿದೊಡ್ಡ ಸಮಸ್ಯೆಯಾದ 'ಸಕಾಲಕ್ಕೆ ಕೃಷಿ ಕಾರ್ಮಿಕರು ಸಿಗದಿರುವ'...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.