ವಿಜಯನಗರ (ಹೊಸಪೇಟೆ) : ಮುಂಗಾರು ಮಳೆಯ ಕೊರತೆಯ ಹಿನ್ನೆಲೆಯಲ್ಲಿ ಜಲಾಶಯದ ನೀರಿನ ಮಟ್ಟ ಕ್ಷೀಣಿಸುತ್ತಿದೆ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ಉಂಟಾಗುವ ಹಿನ್ನೆಲಯಲ್ಲಿ ಜಲಾಶಯದ ನೀರನ್ನು ಕೇವಲ ಕುಡಿಯುವ ಉದ್ದೇಶಕ್ಕೆ ಮಾತ್ರ ಬಳಸಲಾಗುವುದು. ಆದ್ದರಿಂದ ರೈತರು ಕೃಷಿ ಬೆಳೆಗಳಿಗೆ ನೀರನ್ನು ಬಳಸದಂತೆ ಹಾಗೂ ಪರ್ಯಾಯ ಬೆಳೆ ಬೆಳೆಯಲು ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ಮನವಿ ಮಾಡಿದ್ದಾರೆ.
ಎಲ್ ನಿನೋ ಪರಿಣಾಮದಿಂದಾಗಿ ಭೀಕರ ಬರದ ಪರಿಸ್ಥಿತಿ ಎದುರಾಗಿದ್ದು, ತುಂಗಭದ್ರ ಹಾಗೂ ಇತರೆ ಜಲಾಶಯಗಳ ಒಳಹರಿವು ಶೂನ್ಯಕ್ಕಿಳಿದಿದೆ. ರಾಷ್ಟ್ರೀಯ ಮತ್ತು ರಾಜ್ಯ ಜಲ ನೀತಿಯ ಅನ್ವಯ ಜಲಸಂಪನ್ಮೂಲಗಳಲ್ಲಿ ಲಭ್ಯವಿರುವ ನೀರಿಗೆ ಕುಡಿಯುವ ನೀರಿಗೆ ಬಳಕೆಗೆ ಪ್ರಥಮ ಆದ್ಯತೆ ನೀಡಲಾಗಿದೆ.
ಈ ನಿಟ್ಟಿನಲ್ಲಿ ಜಲಾಶಯ ನೀರನ್ನು ನಂಬಿಕೊಂಡು ರೈತರು ಹೊಸ ಬೆಳೆಗಳನ್ನು ಅದರಲ್ಲೂ ವಿಶೇಷವಾಗಿ ಅಧಿಕ ನೀರು ಬೇಡುವ ಬೆಳೆಗಳನ್ನು ಹಾಕಬಾರದು. ಕೃಷಿ ಇಲಾಖೆಯ ಅಧಿಕಾರಿಗಳು ನೀಡುವ ಸಲಹೆಯಂತೆ ಮಳೆ ಆಶ್ರಿತ ಪರ್ಯಾಯ ಬೆಳೆಗಳನ್ನು ಮಾತ್ರ ಬೆಳೆಯುವ ಮೂಲಕ ಸಹಕರಿಸಬೇಕು ಎಂದು ತಿಳಿಸಿದ್ದಾರೆ.
Leave a comment