Home ಸುದ್ದಿಗಳು ಉಚ್ಚಂಗಿದುರ್ಗ ಉಚ್ಚಂಗೆಮ್ಮ ಗುಡ್ಡಕ್ಕೆ ಸಾವಿರಾರು ಭಕ್ತರು
ಸುದ್ದಿಗಳು

ಉಚ್ಚಂಗಿದುರ್ಗ ಉಚ್ಚಂಗೆಮ್ಮ ಗುಡ್ಡಕ್ಕೆ ಸಾವಿರಾರು ಭಕ್ತರು

Share
uchangemma uchangidurga,harapanahalli,devi,temple
Share

ಉಚ್ಚಂಗಿದುರ್ಗಕ್ಕೆ ಭಕ್ತರ ದಂಡು 

ಹರಪನಹಳ್ಳಿ : ಗೌರಿ ಹುಣ್ಣಿಮೆ ಅಂಗವಾಗಿ ತಾಲ್ಲೂಕಿನ ಉಚ್ಚಂಗಿದುರ್ಗದ ಉಚ್ಚಂಗೆಮ್ಮ ಗುಡ್ಡಕ್ಕೆ ಸಾವಿರಾರು ಭಕ್ತರು ಆಗಮಿಸಿದ್ದರು.

ಮಂಗಳವಾರ ರಾತ್ರಿಯಿಂದಲೇ ಭಕ್ತರು ಆಗಮಿಸಿ ದೇವಿ ದರ್ಶನ ಪಡೆದರು. ಉಚ್ಚಂಗೆಮ್ಮ ನಿನ್ನಾಲ್ಕು ಉಧೋ ಉದೋ ಎಂದು ಉದ್ಗರಿಸುತ್ತಾ, ಗುಡ್ಡದ ಅರಿಶಿಣ ಹೊಂಡದಲ್ಲಿ ಸ್ನಾನ ಪೂರ್ಣಗೊಳಿಸಿ ದೇವಿಗೆ ಹಣ್ಣು, ಕಾಯಿ, ಹೂವು ಪಡ್ಲಿಗಿ ಸಮರ್ಪಿಸಿದರು. ಬಂದಿದ್ದ ಭಕ್ತರಿಗೆ ಪ್ರಸಾದದ ವ್ಯವಸ್ಥೆ ಆಯೋಜಿಸಲಾಗಿತ್ತು.

ಗುಡ್ಡದ ಹಿಂಭಾಗ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಇಲ್ಲದೇ ಭಕ್ತರು ಪರದಾಡಿದರು. ಸಾವಿರಾರು ಭಕ್ತರು ಆಗಮಿಸಿದ್ದರಿಂದ ಬಂದೋಬಸ್ತ್ ಸಿಬ್ಬಂದಿ ಕೊರತೆಯಿಂದ ಕೆಲವೊತ್ತು ಅವ್ಯವಸ್ಥೆ ಉಂಟಾಗಿತ್ತು. ಹುಣ್ಣಿಮೆ ದಿವಸ ಗುಡ್ಡಕ್ಕೆ ಬರುವ ಭಕ್ತರ ಸಂಖ್ಯೆ ಹೆಚ್ಚಿರುತ್ತದೆ, ಭದ್ರತೆ ಸಿಬ್ಬಂದಿ ಕಡಿಮೆ ಇದ್ದರೆ ಭಕ್ತರ ನಿಯಂತ್ರಣ ಕಷ್ಟವಾಗುತ್ತದೆ. ಹಾಗಾಗಿ ಹೆಚ್ಚಿನ ಸಂಖ್ಯೆಯ ಸಿಬ್ಬಂದಿ ನಿಯೋಜನೆಗೊಳಿಸಲು ದೇವಸ್ಥಾನ ಸಮಿತಿ ಒತ್ತಾಯಿಸಿದರು. ಪ್ರಭಾರಿ ಮುಖ್ಯ ಕಾರ್ಯನಿರ್ವಾಹಕಿ ಪುಷ್ಪಾವತಿ, ಪಿಎಸ್ಐ. ವಿಜಯಕೃಷ್ಣ, ದೇವಸ್ಥಾನದ ಗುಮಾಸ್ತ ಟಿ.ಗಂಗಾಧರ್, ಜೆ.ನಾಗರಾಜ್, ಹಾಲೇಶ್, ದೇವಸ್ಥಾನ ಸಮಿತಿ ಪದಾಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರಸ್ತೆ ನಿರ್ಮಾಣಕ್ಕೆ ಜಾಗ ತ್ಯಾಗ ಮಾಡಿದ ಗ್ರಾಮಸ್ಥರ ಋಣ ತೀರಿಸಲಾಗದು: ಶಾಸಕ ಹೆಚ್.ಆರ್. ಗವಿಯಪ್ಪ

ವಿಜಯನಗರ (ಹೊಸಪೇಟೆ) : ಊರಿನ ಸಾರ್ವಜನಿಕ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ತಮ್ಮ ಜಾಗ...

Homeಸುದ್ದಿಗಳು

ಕೊಪ್ಪಳ : ಪ್ರತಿಭಾ ಪುರಸ್ಕಾರಕ್ಕೆ ಬನ್ನಿ

ಹರಪನಹಳ್ಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹರಪನಹಳ್ಳಿ ತಾಲೂಕು ಘಟಕದ ವತಿಯಿಂದ 2026-27ನೇ ಸಾಲಿನ...

Homeಸುದ್ದಿಗಳು

ಜಿಲ್ಲೆಯ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಶೇ.100 ಇ-ಫಾರ್ಮ್ ವಿತರಣೆ ಪೂರ್ಣ

ವಿಜಯನಗರ (ಹೊಸಪೇಟೆ)  : ಜಿಲ್ಲೆಯ ಐದು ತಾಲೂಕಿನಿಂದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ...

Homeಸುದ್ದಿಗಳು

ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸದಸ್ಯರ ಆಯ್ಕೆಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : 2026ನೇ ಸಾಲಿಗೆ ಜಿಲ್ಲೆಯಲ್ಲಿ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟು ಜಿಲ್ಲಾ ಮಟ್ಟದ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.