Home ನರೇಗಾ ಮಾದರಿ ಕಾಮಗಾರಿ ಮರುಸ್ಥಾಪನೆಗೆ ಆಗ್ರಹ
Homeಸುದ್ದಿಗಳು

ನರೇಗಾ ಮಾದರಿ ಕಾಮಗಾರಿ ಮರುಸ್ಥಾಪನೆಗೆ ಆಗ್ರಹ

Share
Share

ಹರಪನಹಳ್ಳಿ : ಹೊಸದಾಗಿ ಜಾರಿಗೆ ತಂದಿರುವ ವಿಬಿಜಿ ರಾಮ್‍ಜಿ ಕಾಯ್ದೆಯಡಿ ಹಳೆಯ ನರೇಗಾ ಮಾದರಿ ಕಾಮಗಾರಿಗಳನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ (ಗ್ರಾಕೋಸ್) ನೇತೃತ್ವದಲ್ಲಿ ವಿವಿಧ ಗ್ರಾಮಸ್ಥರು ಶನಿವಾರ ಪ್ರತಿಭಟನೆ ನಡೆಸಿದರು.

ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಬಹಿರಂಗ ಸಭೆ ನಡೆಸಿದ ಕಾರ್ಮಿಕರು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ವೈ.ಎಚ್.ಅವರಿಗೆ ಮನವಿ ಸಲ್ಲಿಸಿದರು.

ಹೊಸ ಕಾನೂನಿನಿಂದ ಗ್ರಾಮೀಣ ಭಾಗದ ಕೂಲಿ ಕಾರ್ಮಿಕರಿಗೆ ಕೆಲಸವಿಲ್ಲದಂತಾಗಿದೆ. ಹೊಸ ಯೋಜನೆಯಲ್ಲಿರುವ 318 ಕಾಮಗಾರಿಗಳ ಪೈಕಿ ಮುಕ್ಕಾಲು ಪಾಲು ಯಂತ್ರಾಧಾರಿತವಾಗಿವೆ. ಸಾಮೂಹಿಕ ಕೂಲಿ ಕೆಲಸ ಮಾಡುವ ಕಾಮಗಾರಿಗೆ ಇದರಲ್ಲಿ ಅವಕಾಶವಿಲ್ಲ. ಇದರಿಂದಾಗಿ ಭೂಮಿ ಇಲ್ಲದ ಬಡ ಕೂಲಿ ಕಾರ್ಮಿಕರು ಅನಿವಾರ್ಯವಾಗಿ ಗುಳೆ ಹೋಗುವ (ವಲಸೆ) ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಇದೆ ಎಂದು ಪ್ರತಿಭಟನಾಕಾರರು ತಿಳಿಸಿದರು.

ಈ ಹಿಂದೆ ನರೇಗಾ ಯೋಜನೆಯು ಗ್ರಾಮೀಣ ಕಾರ್ಮಿಕರಿಗೆ ವರದಾನವಾಗಿತ್ತು.  ಆದರೆ, ಪ್ರಸ್ತುತ ತಾಲ್ಲೂಕಿನಲ್ಲಿ ಮಳೆ ಕೈಕೊಟ್ಟಿದ್ದು, ತೀವ್ರ ಬರಗಾಲ ಆವರಿಸಿದೆ. ಈ ಸಂಕಷ್ಟದ ಸಮಯದಲ್ಲಿ ಕಾರ್ಮಿಕರಿಗೆ ನಿರಂತರ ಕೆಲಸ ನೀಡುವಲ್ಲಿ ಹೊಸ ಕಾನೂನು ವಿಫಲವಾಗಿದೆ. ರಾಜ್ಯ ಸರ್ಕಾರವು ಕೂಡಲೇ ಕೇಂದ್ರದೊಂದಿಗೆ ಮಾತುಕತೆ ನಡೆಸಿ, ಕಾರ್ಮಿಕರಿಗೆ ಅನುಕೂಲವಾಗುವಂತಹ ಉದ್ಯೋಗಗಳನ್ನು ಸೃಷ್ಟಿಸಬೇಕು ಎಂದು ಅವರು ಆಗ್ರಹಿಸಿದರು.

ದನದ ಕೊಟ್ಟಿಗೆ, ಹಳ್ಳಕೊಳ್ಳ, ಗೋಕಟ್ಟೆ, ಚೆಕ್ ಡ್ಯಾಂ ನಿರ್ಮಾಣ ಹಾಗೂ ಹೂಳೆತ್ತುವಂತಹ ಶ್ರಮದಾಯಕ ಕಾಮಗಾರಿಗಳನ್ನು ಮರುಜಾರಿಗೊಳಿಸಬೇಕು. ಕೆಲಸದ ಸ್ಥಳದಲ್ಲಿ ಆಕಸ್ಮಿಕವಾಗಿ ಮೃತಪಡುವ ಕಾರ್ಮಿಕರಿಗೆ ನೀಡುವ ಪರಿಹಾರ ಮೊತ್ತ ಹೆಚ್ಚಿಸಬೇಕು.

ಪ್ರಸ್ತುತ ವಿಬಿ-ಜಿ ರಾಮ್‍ ಜಿ ಯೋಜನೆಯಡಿಯಿರುವ 125 ಮಾನವ ದಿನಗಳ ಬದಲಾಗಿ, ಉದ್ಯೋಗದ ದಿನಗಳನ್ನು 200 ದಿನಗಳಿಗೆ ಏರಿಕೆ ಮಾಡಬೇಕು. ರಾಜ್ಯ ಸಂಚಾಲಕರಾದ ಮಲ್ಲೇಶ್ ಕೋಗಳಿ, ಜಿಲ್ಲಾ ಸಂಚಾಲಕಿ ಅಕ್ಕಮಹಾದೇವಿ, ಅರಸನಾಳು ಮಾರುತಿ, ಚಂದ್ರಮ್ಮ, ಸಿದ್ದಮ್ಮ ನವಲಿ, ರೇಖಾ, ಸವಿತಾ, ಪಾಂಡು, ಹನುಮಂತ, ಶರಣಪ್ಪ, ಜ್ಯೋತಿ, ಲಕ್ಷ್ಮಿ ಇದ್ದರು.

 

Share

Leave a comment

Leave a Reply

Your email address will not be published. Required fields are marked *

Related Articles
Homeಶಿಕ್ಷಣ

ಬಿ.ಐ.ಇ.ಟಿ. ಯಲ್ಲಿ ನೈಲಿಟ್‌ನ 90 ಗಂಟೆಗಳ ‘ಚಿಪ್‌ಕ್ರಾಫ್ಟ್’ ಸೆಮಿಕಂಡಕ್ಟರ್ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ

ದಾವಣಗೆರೆ : ಬಾಪೂಜಿ ಇಂಜಿನಿಯರಿಂಗ್  ಮತ್ತು ತಾಂತ್ರಿಕ ಮಹಾವಿದ್ಯಾಲಯ ಸಂಸ್ಥೆಯ ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ಇಂಜಿನಿಯರಿಂಗ್...

Homeಶಿಕ್ಷಣ

ವಿದ್ಯಾರ್ಥಿ ದೆಸೆಯಲ್ಲೇ ದೊಡ್ಡಮಟ್ಟದ ಸಾಧನೆಯ ಗುರಿ ಇರಲಿ

ಹರಪನಹಳ್ಳಿ: ಶಿಕ್ಷಣ ಪಡೆಯುವಾಗಲೇ ವಿದ್ಯಾರ್ಥಿಗಳು ದೊಡ್ಡಮಟ್ಟದ ಸಾಧನೆಯ ಗುರಿ ಇಟ್ಟುಕೊಳ್ಳಬೇಕು ಎಂದು ಸ್ಥಳೀಯ ಸಲಹಾ ಸಮಿತಿಯ ಅಧ್ಯಕ್ಷರಾದ ಪಿ. ಮಹಾಬಲೇಶ್ವರಗೌಡ್ರು ಕಿವಿಮಾತು ಹೇಳಿದರು. ನಗರದ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ ಎಚ್.ಪಿ.ಎಸ್ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ 2026 -27ನೇ...

Homeಸುದ್ದಿಗಳು

ಮಾನವನ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ

ದಾವಣಗೆರೆ : ಕರ್ನಾಟಕವನ್ನು ಮಾನವ ಕಳ್ಳ ಸಾಗಾಣಿಕೆಯಿಂದ ಮುಕ್ತಗೊಳಿಸಲು ಸಂಕಷ್ಟದಲ್ಲಿರುವ ಜನರನ್ನು ರಕ್ಷಿಸಲು ಹಾಗೂ ಸಾಗಾಣಿಕೆಗೆ...

Homeಸುದ್ದಿಗಳು

ಉಚಿತ ಆರೋಗ್ಯ ಮತ್ತು ಕಣ್ಣಿನ ತಪಾಸಣೆ

ಕಲಬುರಗಿ : ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್ ಕಡಗಂಚಿ , ಹೋಲಿ ಕ್ರಾಸ್ ಅಫಜಲಪುರ,...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.