ವಿಜಯನಗರ(ಹೊಸಪೇಟೆ) :ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಇದೇ ಜುಲೈ 15 ರಂದು ಬೆಳಿಗ್ಗೆ 11: 30ಕ್ಕೆ ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಾಡ ಪ್ರಭು ಕೆಂಪೇಗೌಡ ಜಯಂತೋತ್ಸವನ್ನು ಆಯೋಜಿಸಲಾಗಿದೆ.
ಶಾಸಕರಾದ ಹೆಚ್.ಆರ್. ಗವಿಯಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದು, ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಬಳ್ಳಾರಿ ಲೋಕಸಭೆ ಸಂಸದ ಈ. ತುಕಾರಾಮ್, ದಾವಣಗೆರೆ ಲೋಕಸಭೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ ಹಾಗೂ ಹಗರಿಬೊಮ್ಮನಹಳ್ಳಿ ಶಾಸಕ ಕೆ. ನೇಮಿರಾಜ ನಾಯ್ಕ, ಕೂಡ್ಲಿಗಿ ಶಾಸಕ ಡಾ.ಎನ್.ಟಿ. ಶ್ರೀನಿವಾಸ್, ಹಡಗಲಿ ಶಾಸಕ ಎಲ್. ಕೃಷ್ಣ ನಾಯಕ, ಹರಪನಹಳ್ಳಿ ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ, ಜಗಳೂರು ಶಾಸಕ ಬಿ. ದೇವೇಂದ್ರಪ್ಪ, ವಿಧಾನ ಪರಿಷತ್ ಶಾಸಕರಾದ ಚಂದ್ರಶೇಖರ ಬಿ. ಪಾಟೀಲ್, ಶಶೀಲ್ ಜಿ.
ನಮೋಶಿ, ವೈ.ಎಂ. ಸತೀಶ್ ಹಾಗೂ ನಗರಸಭೆ ಅಧ್ಯಕ್ಷ ಎನ್.ರೂಪೇಶ್ ಕುಮಾರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎನ್.ಎಫ್. ಇಮಾಮ್ ನಿಯಾಜಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ಶಿವಮೂರ್ತಿ, ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜಾಹ್ನವಿ ಹಾಗೂ ಜಿಲ್ಲಾ ಪಂಚಾಯತ್ ಸಿ ಇ ಒ ನೋಂಗ್ಜಾಯ್ ಮಹ್ಮದ್ ಅಲಿ ಅಕ್ರಂ ಷಾ ಭಾಗವಹಿಸಲಿದ್ದಾರೆ.
ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಸಾಗರಗೌಡ ನಾಡ ಪ್ರಭು ಕೆಂಪೇಗೌಡ ಅವರ ಕುರಿತ ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ ರಂಗಣ್ಣವರ ತಿಳಿಸಿದ್ದಾರೆ.
Leave a comment