Home 4,44,094 ಮಕ್ಕಳಿಗೆ ಅಲ್ಬೆಂಡಜೋಲ್ ಮಾತ್ರೆ ವಿತರಣೆ ಗುರಿ: ಡಿಹೆಚ್‌ಒ ಡಾ.ಟಿ.ಲಿಂಗರಾಜು
Homeಸುದ್ದಿಗಳು

4,44,094 ಮಕ್ಕಳಿಗೆ ಅಲ್ಬೆಂಡಜೋಲ್ ಮಾತ್ರೆ ವಿತರಣೆ ಗುರಿ: ಡಿಹೆಚ್‌ಒ ಡಾ.ಟಿ.ಲಿಂಗರಾಜು

Share
Share

ವಿಜಯನಗರ : ರಾಷ್ಟ್ರೀಯ ಜಂತುಹುಳು ನಿವಾರಣಾ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ 1,583 ಅಂಗನವಾಡಿ ಕೇಂದ್ರಗಳು, 1,203 ಸರ್ಕಾರಿ ಶಾಲೆಗಳು ಹಾಗೂ 406 ಖಾಸಗಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಒಟ್ಟು 4,44,094 ಮಕ್ಕಳಿಗೆ ಅಲ್ಬೆಂಡಜೋಲ್ ಮಾತ್ರೆ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಟಿ.ಲಿಂಗರಾಜು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಹಯೋಗದಲ್ಲಿ ಸೋಮವಾರ ಅಮರಾವತಿ ಸರ್ಕಾರಿ ಬಾಲಕಿಯರ ಪ್ರೌಢ ಶಾಲೆಯಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಜಂತುಹುಳುಗಳ ಬಾಧೆಯಿಂದ ಮಕ್ಕಳಲ್ಲಿ ಅಪೌಷ್ಟಿಕತೆ ಹಾಗೂ ರಕ್ತಹೀನತೆ ಉಂಟಾಗಿ, ದೈಹಿಕ ಬೆಳವಣಿಗೆಯ ಜೊತೆಗೆ ಜ್ಞಾಪಕ ಶಕ್ತಿಯ ಮೇಲೂ ಪರಿಣಾಮ ಬೀರುತ್ತದೆ. ಆದ್ದರಿಂದ ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದರು. ದೇಶದಲ್ಲಿ ಶೇ.56ರಷ್ಟು ಜನರಲ್ಲಿ ರಕ್ತಹೀನತೆ ಕಂಡುಬರುತ್ತಿದ್ದು, ಮಹಿಳೆಯರು ಹಾಗೂ ಮಕ್ಕಳಲ್ಲಿ ಇದರ ಪ್ರಮಾಣ ಹೆಚ್ಚಾಗಿ ಕಂಡುಬರುತ್ತದೆ. ಜಂತುಹುಳುಗಳ ಸೋಂಕಿನಿAದ ಮಕ್ಕಳನ್ನು ರಕ್ಷಿಸಲು ಮನೆಯ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು.

ಊಟ ಮಾಡುವ ಮೊದಲು ಹಾಗೂ ಶೌಚಾಲಯ ಬಳಕೆಯ ನಂತರ ಸೋಪಿನಿಂದ ಕೈಗಳನ್ನು ಚೆನ್ನಾಗಿ ತೊಳೆಯಬೇಕು. ಬಿಸಿಯಾದ ಆಹಾರವನ್ನು ಸೇವಿಸಬೇಕು. ತರಕಾರಿ ಹಾಗೂ ಹಣ್ಣುಗಳನ್ನು ಸೇವಿಸುವ ಮೊದಲು ಸ್ವಚ್ಛವಾಗಿ ತೊಳೆಯಬೇಕು. ಮಕ್ಕಳು ಬರಿಗಾಲಿನಲ್ಲಿ ಓಡಾಡುವುದನ್ನು ತಪ್ಪಿಸಬೇಕು ಎಂದು ಸಲಹೆ ನೀಡಿದರು. ಜಂತುಹುಳು ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ನೀಡುವ ಅಲ್ಬೆಂಡಜೋಲ್ ಮಾತ್ರೆಗಳನ್ನು ಸೇವಿಸಬೇಕು. 1ರಿಂದ 19 ವರ್ಷದೊಳಗಿನ ಎಲ್ಲ ಮಕ್ಕಳು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡು ಜಂತುಹುಳು ಮುಕ್ತ ಜಿಲ್ಲೆಯನ್ನಾಗಿಸಲು ಎಲ್ಲರೂ ಸಹಕರಿಸಬೇಕು ಎಂದು ಕರೆ ನೀಡಿದರು.

ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ.ಜಂಬಯ್ಯ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಅಮರಾವತಿ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಾಜೀವ್ ಅವರು ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಡಾ.ನಾಗರಾಜ್ ಹವಲ್ದಾರ್, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ರಾಧಿಕಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಗಂಗಪ್ಪ, ಅಮರಾವತಿ ಸರ್ಕಾರಿ ಬಾಲಕಿಯರ ಪ್ರೌಢ ಶಾಲೆಯ ಪ್ರಾಂಶುಪಾಲ ವೆಂಕಟೇಶ್ ಸೇರಿದಂತೆ ವಿದ್ಯಾರ್ಥಿಗಳು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಉಪಸ್ತಿತರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
DKS BANGLORE
Homeರಾಜಕೀಯ

ಕೆ.ಎಚ್.ಮುನಿಯಪ್ಪಗೆ ಸಮಾಜ ಕಲ್ಯಾಣ, ಉಳಿದವರಿಗೆ ಯಾವ ಖಾತೆ ?

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಸಚಿವ ಸಂಪುಟದ ಖಾತೆ ಹಂಚಿಕೆ ಪ್ರಕ್ರಿಯೆ ಕೊನೆಗೂ...

Homeಸುದ್ದಿಗಳು

ಅರಸೀಕೆರೆಯಲ್ಲಿ 6ನೇ ತಾಲ್ಲೂಕು ಸಮ್ಮೇಳನಕ್ಕೆ ಸಮ್ಮತಿ

ಹರಪನಹಳ್ಳಿ : ಕನ್ನಡ ಸಾಹಿತ್ಯ ಸಮ್ಮೇಳನ ಗ್ರಾಮೀಣ ಪ್ರದೇಶಕ್ಕೆ ಪಸರಿಸುವ ನಿಟ್ಟಿನಲ್ಲಿ ಅರಸೀಕೆರೆಯಲ್ಲಿ ಹಮ್ಮಿಕೊಳ್ಳಲು ಉದ್ದೇಶಿಸಿರುವ...

Homeಸುದ್ದಿಗಳು

ಮಾದರ ಮಹಾಸಭಾ ಸದಸ್ಯತ್ವ ನೊಂದಣಿಗೆ ಚಾಲನೆ

ಹರಪನಹಳ್ಳಿ : ರಾಜ್ಯಾಧ್ಯಂತ ಮಾದರ ಮಹಾಸಭಾ ಸದೃಢವಾಗಿ ಕಟ್ಟಲು ಸದಸ್ಯತ್ವ ನೊಂದಾಣಿ ಆರಂಭಿಸಲಾಗಿದ್ದು ಹೆಚ್ಚಿನ ಸಂಖ್ಯೆಯಲ್ಲಿ...

Homeಸುದ್ದಿಗಳು

ಅಂಚೆ ಇಲಾಖೆಯಿಂದ ಆಧಾರ್ ಸೇವೆಗಳ ವಿಸ್ತರಣೆ

ವಿಜಯನಗರ : ಜಿಲ್ಲೆಯ ಸಾರ್ವಜನಿಕರಿಗೆ ಸುಲಭ, ಸುರಕ್ಷಿತ ಹಾಗೂ ಆಧಾರ್ ನವೀಕರಣ ಸೇರಿದಂತೆ ವಿವಿದ ಆಧಾರ್...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.