ವಿಜಯನಗರ : ಗಣೇಶ ಚತುರ್ಥಿ ಹಬ್ಬದ ಸಂಬAಧ ಜಿಲ್ಲೆಯಾದ್ಯಂತ ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್ (ಪಿಒಪಿ) ಮತ್ತು ರಾಸಾಯನಿಕ ಗುಣಗಳುಳ್ಳ ವಸ್ತುಗಳನ್ನು ಬಳಸಿ ಗಣೇಶ ಮೂರ್ತಿಗಳ ತಯಾರಿಕೆ, ಸಂಗ್ರಹಣೆ, ಮಾರಾಟ, ಬಳಕೆ ಮತ್ತು ವಿಸರ್ಜನೆಯನ್ನು ನಿಷೇಧಿಸಲಾಗಿದೆ. ಪ್ರಸಕ್ತ ಸಾಲಿನ ಪರಿಸರ ಸ್ನೇಹಿ ಗಣೇಶ ಹಬ್ಬವನ್ನು ಭಕ್ತಿ ಮತ್ತು ಸಂಭ್ರಮದಿAದ ಆಚರಿಸಬೇಕು.
ನೈಸರ್ಗಿಕ, ಜೈವಿಕವಾಗಿ ವಿಘಟನೀಯ ಮತ್ತು ಪರಿಸರ ಸ್ನೇಹಿ ವಸ್ತುಗಳಿಂದ ವಿಶೇಷವಾಗಿ ನೈಸರ್ಗಿಕ ಜೇಡಿಮಣ್ಣಿನಿಂದ ಮಾಡಿದ ಮೂರ್ತಿಗಳನ್ನು ಪ್ರೋತ್ಸಾಹಿಸಲು ಮತ್ತು ಪ್ಲಾಸ್ಟರ್ ಆಫ್ ಪ್ಯಾರಿಸ್ನಿಂದ ಮಾಡಿದ ಹಾಗೂ ಏಕ-ಬಳಕೆಯ ಪ್ಲಾಸ್ಟಿಕ್ ಥರ್ಮೋಕೋಲ್ಕಂದ ಲೇಪಿತವಾದ ಮೂರ್ತಿಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅವರು ತಿಳಿಸಿದ್ದಾರೆ.
Leave a comment