Home ಸುದ್ದಿಗಳು ಬಸವಣ್ಣನವರ ವಿಚಾರಧಾರೆಗಳು ಸಾರ್ವಕಾಲಿಕ ಪ್ರಸ್ತುತ
ಸುದ್ದಿಗಳು

ಬಸವಣ್ಣನವರ ವಿಚಾರಧಾರೆಗಳು ಸಾರ್ವಕಾಲಿಕ ಪ್ರಸ್ತುತ

Share
KUDLIGI BASAVA JAYANTI
Share

ಕೂಡ್ಲಿಗಿ:  ಸಮಾನತೆ, ಕಾಯಕ ಮತ್ತು ದಾಸೋಹ ತತ್ವಗಳ ಮೂಲಕ ವಿಶ್ವಕ್ಕೆ ಪ್ರಜಾಪ್ರಭುತ್ವದ ಮಾದರಿ ನೀಡಿದ ಬಸವಣ್ಣನವರ ವಿಚಾರಧಾರೆಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಹಿಟ್ನಾಳ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ   ಟಿ.ಎಚ್. ಬಸವರಾಜ ಅಭಿಪ್ರಾಯಪಟ್ಟರು.

ಪಟ್ಟಣದ ಶ್ರೀಮತಿ ಅಂಗಡಿ ವೀರಮ್ಮ, ತಿರುಕಪ್ಪ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ಜಾಗತಿಕ ಲಿಂಗಾಯತ ಮಹಾಸಭಾ ಶುಕ್ರವಾರ ಆಯೋಜಿಸಿದ್ದ ‘ಕರ್ನಾಟಕ ಸಾಂಸ್ಕೃತಿಕ ನಾಯಕ ಬಸವಣ್ಣ’ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

12ನೇ ಶತಮಾನದಲ್ಲಿ ಬಸವಣ್ಣನವರು ಸ್ಥಾಪಿಸಿದ ‘ಅನುಭವ ಮಂಟಪ’ವು ವಿಶ್ವದ ಮೊದಲ ಸಂಸತ್ತು. ಇಲ್ಲಿ ಶರಣರು ವಚನಗಳ ಮೂಲಕ ಸಾಮಾಜಿಕ ಸಂಘರ್ಷಗಳಿಗೆ ಪರಿಹಾರ ಕಂಡುಕೊಳ್ಳುತ್ತಿದ್ದರು. ಜಾತಿ ಪದ್ಧತಿ, ಮೌಢ್ಯ ಹಾಗೂ ಲಿಂಗ ತಾರತಮ್ಯದ ವಿರುದ್ಧ ಸಿಡಿದೆದ್ದ ಬಸವಣ್ಣನವರು ‘ಕಾಯಕವೇ ಕೈಲಾಸ’ ಎಂಬ ತತ್ವದಡಿ ಸಾಮಾಜಿಕ ಸಮಾನತೆಗಾಗಿ ಶ್ರಮಿಸಿದರು.

ಜಾಗತಿಕ ಲಿಂಗಾಯತ ಮಹಾಸಭಾದ ರಾಜ್ಯ ಕಾರ್ಯಕಾರಿಣಿ ಸದಸ್ಯ ಟಿ.ಜಿ. ಮಲ್ಲಿಕಾರ್ಜುನ ಗೌಡ ಮಾತನಾಡಿ, ಬಸವಣ್ಣನವರನ್ನು ಒಂದು ಸಮುದಾಯಕ್ಕೆ ಸೀಮಿತಗೊಳಿಸದೆ ಅವರ ವಿಶ್ವಮಾನವ ಸಂದೇಶವನ್ನು ಎಲ್ಲೆಡೆ ಪಸರಿಸುವ ಅಗತ್ಯವಿದೆ ಎಂದರು. ವೇದಿಕೆಯಲ್ಲಿ ಪ್ರಾಚಾರ್ಯ ಷಣ್ಮುಖನ ಗೌಡ ಸಂಕಾಳ್, ಶರಣ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಕೆ. ರವೀಂದ್ರನಾಥ್, ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಎಸ್. ಬಸವರಾಜ ಮಾವಿನಹಳ್ಳಿ, ಉಪಾಧ್ಯಕ್ಷ ಎಸ್. ರಾಜೇಂದ್ರ ಪ್ರಸಾದ್, ಜಿಲ್ಲಾ ಕಾರ್ಯದರ್ಶಿ ಎನ್.ಎಂ. ರವಿಕುಮಾರ್, ಸಂಚಾಲಕ ವಿ. ಅನಿಲ್ ಕುಮಾರ್, ಸುನೀಲ್ ಗೌಡ, ಲೋಕೇಶ್ ಅವರದಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

 

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರಸ್ತೆ ನಿರ್ಮಾಣಕ್ಕೆ ಜಾಗ ತ್ಯಾಗ ಮಾಡಿದ ಗ್ರಾಮಸ್ಥರ ಋಣ ತೀರಿಸಲಾಗದು: ಶಾಸಕ ಹೆಚ್.ಆರ್. ಗವಿಯಪ್ಪ

ವಿಜಯನಗರ (ಹೊಸಪೇಟೆ) : ಊರಿನ ಸಾರ್ವಜನಿಕ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ತಮ್ಮ ಜಾಗ...

Homeಸುದ್ದಿಗಳು

ಕೊಪ್ಪಳ : ಪ್ರತಿಭಾ ಪುರಸ್ಕಾರಕ್ಕೆ ಬನ್ನಿ

ಹರಪನಹಳ್ಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹರಪನಹಳ್ಳಿ ತಾಲೂಕು ಘಟಕದ ವತಿಯಿಂದ 2026-27ನೇ ಸಾಲಿನ...

Homeಸುದ್ದಿಗಳು

ಜಿಲ್ಲೆಯ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಶೇ.100 ಇ-ಫಾರ್ಮ್ ವಿತರಣೆ ಪೂರ್ಣ

ವಿಜಯನಗರ (ಹೊಸಪೇಟೆ)  : ಜಿಲ್ಲೆಯ ಐದು ತಾಲೂಕಿನಿಂದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ...

Homeಸುದ್ದಿಗಳು

ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸದಸ್ಯರ ಆಯ್ಕೆಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : 2026ನೇ ಸಾಲಿಗೆ ಜಿಲ್ಲೆಯಲ್ಲಿ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟು ಜಿಲ್ಲಾ ಮಟ್ಟದ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.