Home ಸುದ್ದಿಗಳು ಬಸವಾದಿ ಶರಣರಂತೆ ವೀರೇಂದ್ರ ಹೆಗ್ಗಡೆ ಕ್ರಾಂತಿ
ಸುದ್ದಿಗಳು

ಬಸವಾದಿ ಶರಣರಂತೆ ವೀರೇಂದ್ರ ಹೆಗ್ಗಡೆ ಕ್ರಾಂತಿ

Share
Harapanahalli Swamiji
Share

ಸಿರಿಸುದ್ದಿ.ಕಾಂ, ಹರಪನಹಳ್ಳಿ : 12ನೇ ಶತಮಾನದಲ್ಲಿ ಬಸವಣ್ಣ ನೇತೃತ್ವದಲ್ಲಿ ನಡೆದ ಸಮ ಸಮಾಜದ ಕ್ರಾಂತಿ ಮಾದರಿಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎಂದು ನೀಲಗುಂದ ಗುಡ್ಡದ ವಿರಕ್ತಮಠದ ಚನ್ನಬಸವ ಶಿವಯೋಗಿ ಸ್ವಾಮೀಜಿ ಅಭಿಪ್ರಾಯಪಟ್ಟರು.

ನಗರದ ರೇಣುಕಾಚಾರ್ಯ ಕಲ್ಯಾಣ ಮಂಟಪದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ , ಜಗಳೂರು ಜನಜಾಗೃತಿ ವೇದಿಕೆ ಸಹಯೋಗದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಗಾಂಧಿಸ್ಮೃತಿ, ಪಾನಮುಕ್ತ ಸಾಧಕರಿಗೆ ಅಭಿನಂದನಾ ಸಮಾರಂಭದ ಸಾನ್ನಿಧ್ಯವಹಿಸಿ ಅವರು ಮಾತನಾಡಿದರು.

ವೀರೇಂದ್ರ ಹೆಗ್ಗಡೆ ಅವರು ಸ್ವರಾಜ್ ಕ್ರಾಂತಿ ಶುರು ಮಾಡಿದ್ದಾರೆ. ಮಠ, ಸಂಘ ಸಂಸ್ಥೆಗಳು ಮಾಡದ ಕಾರ್ಯವನ್ನು ಧರ್ಮಸ್ಥಳಯೋಜನೆ ಮಾಡುತ್ತಿದೆ. ಆದರೆ ಕೆಲವೂ ಸಂಸ್ಥೆಗಳು ಈಗಲೂ ಬೋಗಸ್ ದಾಖಲೆ ಸೃಷ್ಟಿಸಿ ಸರ್ಕಾರದ ಸವಲತ್ತು ಪಡೆಯುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದರು.

ಮದ್ಯ ಕುಡಿಯುವುದು ಮನುಷ್ಯನ ದೇಹಕ್ಕೆ, ಸ್ವಸ್ಥ ಸಮಾಜ ಕಲುಷಿತಗೊಳಿಸುವುದು ಅಪಾಯಕಾರಿಯಾಗಿದೆ. ಇದನ್ನು ಮನಗಂಡಿದ್ದ ಬಸವಾದಿ ಶರಣರು ಸಮಾನತೆಗಾಗಿ ಹೋರಾಡಿದರು. ಸನ್ಯಾಸ ಧೀಕ್ಷೆಯಿಂದ ಶಾಂತಿ ಸಮಧಾನ, ನೆಮ್ಮದಿ ಸಿಗುತ್ತದೆ. ಜೀವನ ನೋಟ್ ಪುಸ್ತಕವಿದ್ದಂತೆ, ಅದರಲ್ಲಿ ಎಲ್ಲವೂ ದಾಖಲಾಗಿರುತ್ತವೆ ಎಂದರು. ನಿಷ್ಕ್ರಿಯ ವಾಗಿರದೇ, ಕ್ರಿಯಾಶೀಲವಾಗಿರಬೇಕು ಎಂದು ತಿಳಿಸಿದರು.

ಧರ್ಮಸ್ಥಳ ಯೋಜನೆ ಜಗಳೂರು ಜಿಲ್ಲಾ ನಿರ್ದೇಶಕ ಪ್ರವೀಣ್ ಕುಮಾರ, ಮದ್ಯಪಾನ ಮುಕ್ತ ಗ್ರಾಮಗಳನ್ನಾಗಿ ಮಾಡಲು ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಪಣತೊಟ್ಟಿದೆ, ಇದು ಸಾಕಾರಗೊಳ್ಳಲು ಪ್ರತಿಯೊಬ್ಬರ ಸಹಕಾರ ಅಗತ್ಯವಿದೆ ಎಂದರು.
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷ ಪಿ.ಎಸ್.ಅರವಿಂದನ್ ಮಾತನಾಡಿ, ಗಾಂಧೀಜಿ ಅವರ ಗ್ರಾಮ ಸ್ವರಾಜ್ ಆಶಯ ಸಾಕಾರಗೊಳಿಸವ ನಿಟ್ಟಿನಲ್ಲಿ ವೀರೇಂದ್ರ ಹೆಗ್ಗಡೆ ಅವರು ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.

ಜನಜಾಗೃತಿ ವೇದಿಕೆ ಜಿಲ್ಲಾ ಉಪಾಧ್ಯಕ್ಷ ಗುಂಡಗತ್ತಿ ಬಿ.ಜಿ.ಮಂಜುನಾಥ, ಧರ್ಮಸ್ಥಳ ಯೋಜನೆ ಬಗ್ಗೆ ಅಪಪ್ರಚಾರ ಮಾಡುವವರ ಬಗ್ಗೆ ಜನರು ಜಾಗೃತರಾಗಿರಬೇಕು ಎಂದರು. ಮದ್ಯಪಾನ ಮುಕ್ತ ನವಜೀವನ ಸಮಿತಿ ಮದ್ಯಪಾನ ಮುಕ್ತ ಸಾಧಕರಿಗೆ ಸನ್ಮಾನಿಸಿದರು. ಸುಜ್ಞಾನ ನಿಧಿಯಡಿ 266 ವಿದ್ಯಾರ್ಥಿಗಳಿಗೆ ಮಾಸಿಕ ಶಿಷ್ಯವೇತನ ಪ್ರಮಾಣ ವಿತರಿಸಲಾಯಿತು. ಜನಜಾಗೃತಿ ಸಮಿತಿ ಸದಸ್ಯರಾದ ಜಿ.ಬಿ.ಸಿದ್ದಪ್ಪ, ಎಸ್.ಪಿ.ಲಿಂಬ್ಯನಾಯ್ಕ, ಶೈಲಜಾ, ತಿಪ್ಪೆಸ್ವಾಮಿ, ಯೋಜನಾಧಿಕಾರಿಗಳಾದ ಸುಬ್ರಹ್ಮಣ್ಯ, ಬಾಬು ಇತರರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಅನ್ಯಾಯದ ವಿರುದ್ಧ ಹೋರಾಡುವ ಶಕ್ತಿ ಪತ್ರಿಕೋದ್ಯಮಕ್ಕಿದೆ: ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ

ಹರಪನಹಳ್ಳಿ : ಸಮಾಜದ ಆಗುಹೋಗುಗಳ ಸತ್ಯಾಸತ್ಯತೆ ಘಟನೆಗಳನ್ನು ತೋರಿಸುವ ಮಾದ್ಯಮ ಕ್ಷೇತ್ರ ಕನ್ನಡ ರೀತಿಯಲ್ಲಿ ಕಾರ್ಯನಿರ್ವಹಿಸುತಿದೆ...

Homeಸುದ್ದಿಗಳು

ರಸ್ತೆ ನಿರ್ಮಾಣಕ್ಕೆ ಜಾಗ ತ್ಯಾಗ ಮಾಡಿದ ಗ್ರಾಮಸ್ಥರ ಋಣ ತೀರಿಸಲಾಗದು: ಶಾಸಕ ಹೆಚ್.ಆರ್. ಗವಿಯಪ್ಪ

ವಿಜಯನಗರ (ಹೊಸಪೇಟೆ) : ಊರಿನ ಸಾರ್ವಜನಿಕ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ತಮ್ಮ ಜಾಗ...

Homeಸುದ್ದಿಗಳು

ಕೊಪ್ಪಳ : ಪ್ರತಿಭಾ ಪುರಸ್ಕಾರಕ್ಕೆ ಬನ್ನಿ

ಹರಪನಹಳ್ಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹರಪನಹಳ್ಳಿ ತಾಲೂಕು ಘಟಕದ ವತಿಯಿಂದ 2026-27ನೇ ಸಾಲಿನ...

Homeಸುದ್ದಿಗಳು

ಜಿಲ್ಲೆಯ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಶೇ.100 ಇ-ಫಾರ್ಮ್ ವಿತರಣೆ ಪೂರ್ಣ

ವಿಜಯನಗರ (ಹೊಸಪೇಟೆ)  : ಜಿಲ್ಲೆಯ ಐದು ತಾಲೂಕಿನಿಂದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.