ವಿಜಯನಗರ(ಹೊಸಪೇಟೆ) : ನಗರದ ಕಾಮಧೇನು ಸ್ವೀಟ್ಸ್ ಹಿಂಭಾಗದಲ್ಲಿ ಹರಿಯುವ ಬಸವಣ್ಣ ಕಾಲುವೆಯಲ್ಲಿ ಸುಮಾರು 1-2 ದಿನಗಳ ಅನಾಮಧೇಯ ಗಂಡು ನವಜಾತ ಶಿಶುವಿನ ಮೃತದೇಹ ತೇಲುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ಕುರಿತು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬುಧವಾರ ಮಧ್ಯಾಹ್ನ ಕಾಲುವೆಯಲ್ಲಿ ಮಗುವಿನ ಮೃತದೇಹ ತೇಲುತ್ತಿರುವುದನ್ನು ಗಮನಿಸಿದ ಸಾರ್ವಜನಿಕರು ತಕ್ಷಣ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಿದ್ದಾರೆ. ಮಾಹಿತಿ ಲಭ್ಯವಾಗುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಮಕ್ಕಳ ರಕ್ಷಣಾಧಿಕಾರಿ ಕಾಳಿದಾಸ ಅವರು ಪರಿಶೀಲನೆ ನಡೆಸಿದ್ದಾರೆ. ಅಕ್ರಮ ಸಂಬಂಧ ಅಥವಾ ಜನನದ ವಿಚಾರವನ್ನು ಮುಚ್ಚಿಡುವ ಉದ್ದೇಶದಿಂದ ಯಾರೋ ದುಷ್ಕರ್ಮಿಗಳು ಮಗುವನ್ನು ಕಾಲುವೆಗೆ ಎಸೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
Leave a comment