ಗೋವಾ-ಹೊಸದಿಲ್ಲಿ ನಡುವಿನ ವಿಮಾನ ಪ್ರಯಾಣದ ವೇಳೆ ಖಾನಾಪುರದ ಮಾಜಿ ಶಾಸಕಿಯಾದ ಡಾ.ಅಂಜಲಿ ನಿಂಬಾಳ್ಕರ್ ಅವರು ಅಮೇರಿಕಾದ ಮಹಿಳೆಯೊಬ್ಬರಿಗೆ ತುರ್ತು ವೈದ್ಯಕೀಯ ನೆರವು ನೀಡಿ, ಆಕೆಯ ಜೀವ ಉಳಿಸಿದ ಸುದ್ದಿ ವೈರಲ್ ಆಗಿದೆ. ಮಾನವೀಯತೆ ಮೆರೆದ ಡಾ.ಅಂಜಲಿ ನಿಂಬಾಳ್ಕರ ಅವರ ಪರಿಚಯ ಇಲ್ಲಿದೆ.
ಅಂಜಲಿ ನಿಂಬಾಳ್ಕರ್ ಒಬ್ಬ ಭಾರತೀಯ ವೈದ್ಯೆ ಮತ್ತು ರಾಜಕಾರಣಿ. ಅಂಜಲಿ ನಿಂಬಾಳ್ಕರ್ ಅವರು ಆಗಸ್ಟ್ 22, 1976 ರಂದು ಕರ್ನಾಟಕದ ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ಹಿಂದೂ ಕುಟುಂಬದಲ್ಲಿ ಜನಿಸಿದರು. ಅವರು ಭಾರತೀಯ ಪೊಲೀಸ್ ಸೇವೆಯ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರನ್ನು ವಿವಾಹವಾಗಿದ್ದಾರೆ. ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಮತ್ತು ವಕ್ತಾರೆ ಆಗಿದ್ದಾರೆ. ಅವರು 2018 ರಿಂದ 2023ರವರೆಗೆ ಕರ್ನಾಟಕ ವಿಧಾನಸಭೆಯಲ್ಲಿ ಬೆಳಗಾವಿ ಜಿಲ್ಲೆಯ ಖಾನಾಪುರದಿಂದ ಪ್ರತಿನಿಧಿಸಿದ್ದರು. 2024ರ ಭಾರತೀಯ ಸಾರ್ವತ್ರಿಕ ಚುನಾವಣೆಯಲ್ಲಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದರು.
2018 ರಲ್ಲಿ ಅಂಜಲಿ ನಿಂಬಾಳ್ಕರ್ ಅವರು ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಖಾನಾಪುರದಿಂದ ಚುನಾವಣೆಯಲ್ಲಿ ಸ್ಪರ್ಧಿಸಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ವಿಠಲ್ ಹಲಗೇಕರ್ ವಿರುದ್ಧ ಗೆದ್ದರು. ಅವರು ಒಟ್ಟು 36,649 ಮತಗಳನ್ನು ಗಳಿಸಿ, ಹಲಗೇಕರ್ ಅವರನ್ನು 5133 ಮತಗಳ ಅಂತರದಿಂದ ಸೋಲಿಸಿದ್ದರು. ಕರ್ನಾಟಕ ಸರ್ಕಾರವು 2022 ರ ಕರ್ನಾಟಕ ಸಚಿವರ ವೇತನ ಮತ್ತು ಭತ್ಯೆ (ತಿದ್ದುಪಡಿ) ಮಸೂದೆಯ ಅಡಿಯಲ್ಲಿ ವೇತನ ಹೆಚ್ಚಳ ಮಾಡಲು ನಿಂಬಾಳ್ಕರ್ ಪ್ರತಿಭಟಿಸಿದ್ದರು. ಮತ್ತು ನಾಗರಿಕರಿಗೆ ಉತ್ತಮ ಸೌಲಭ್ಯಗಳನ್ನು ಒದಗಿಸಲು ಸರ್ಕಾರವು ಅದೇ ಹಣವನ್ನು ಖರ್ಚು ಮಾಡುವಂತೆ ವಿನಂತಿಸಿದರು.
ನಿಂಬಾಳ್ಕರ್ ಅವರು ಸ್ತ್ರೀರೋಗ ಶಾಸ್ತ್ರ ಮತ್ತು ಲ್ಯಾಪರೊಸ್ಕೋಪಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕರ್ನಾಟಕ ವಿಧಾನಸಭೆಗೆ ಆಯ್ಕೆಯಾದ ಹತ್ತು ವೈದ್ಯರಲ್ಲಿ ಇವರು ಸಹ ಒಬ್ಬರು. ತಮ್ಮ ಕ್ಷೇತ್ರದಿಂದ ಬಡ ಮತ್ತು ನಿರ್ಲಕ್ಷಿತ ಸಮುದಾಯಗಳ ಸಮಸ್ಯೆಗಳನ್ನು ಎತ್ತಿ ತೋರಿಸಲು ಅವರು ಪಾದಯಾತ್ರೆಯನ್ನು ಆಯೋಜಿಸಿದ್ದರು. 2023ರ ವಿಧಾನಸಭಾ ಚುನಾವಣೆಯಲ್ಲಿ, ಅವರು ಹಲಗೇಕರ್ ವಿರುದ್ಧ 54,000ಕ್ಕೂ ಹೆಚ್ಚು ಮತಗಳ ಅಂತರದಿಂದ ಸೋತರು.
2024ರ ಲೋಕಸಭೆಗೆ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ, ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಉತ್ತರ ಕನ್ನಡ ಕ್ಷೇತ್ರದಲ್ಲಿ ಸ್ಪರ್ಧಿಸಿದರು. ಆದಾಗ್ಯೂ, ಈ ಚುನಾವಣೆಯಲ್ಲಿ ಅವರು ಯಶಸ್ವಿಯಾಗಲಿಲ್ಲ.ಡಾ. ಅಂಜಲಿ ನಿಂಬಾಳ್ಕರ್ ಅವರು ಭಾರತೀಯ ವೈದ್ಯೆ ಮತ್ತು ರಾಜಕಾರಣಿ. ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಮತ್ತು ವಕ್ತಾರರಾಗಿದ್ದಾರೆ.
2018 ರಿಂದ 2023 ರವರೆಗೆ ಕರ್ನಾಟಕ ವಿಧಾನಸಭೆಯಲ್ಲಿ ಬೆಳಗಾವಿ ಜಿಲ್ಲೆಯ ಖಾನಾಪುರ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸಿ ಶಾಸಕಿಯಾಗಿದ್ದರು. ಅವರು 2024ರ ಲೋಕಸಭಾ ಚುನಾವಣೆಯಲ್ಲಿ ಉತ್ತರ ಕನ್ನಡ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಗೋವಾ ಮತ್ತು ದಾದ್ರಾ ಮತ್ತು ನಗರ್ ಹವೇಲಿ ರಾಜ್ಯಗಳ ಉಸ್ತುವಾರಿ ಕಾರ್ಯದರ್ಶಿಯಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ಗೋವಾದಿಂದ ನವದೆಹಲಿಗೆ ತೆರಳುತ್ತಿದ್ದ ವಿಮಾನದಲ್ಲಿ ತೀವ್ರ ಅಸ್ವಸ್ಥಗೊಂಡ ಅಮೆರಿಕದ ಯುವತಿಗೆ ತುರ್ತು ವೈದ್ಯಕೀಯ ಚಿಕಿತ್ಸೆ ನೀಡಿ ಜೀವ ಉಳಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಡಾ.ಅಂಜಲಿ ನಿಂಬಾಳ್ಕರ ಬಗ್ಗೆ ಮುಖ್ಯಮಂತ್ರಿ ಪ್ರಶಂಸೆ
ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಹೀಗೆ ಬರೆದಿದ್ದಾರೆ. ‘ಗೋವಾ-ಹೊಸದಿಲ್ಲಿ ನಡುವಿನ ವಿಮಾನ ಪ್ರಯಾಣದ ವೇಳೆ ಖಾನಾಪುರದ ಮಾಜಿ ಶಾಸಕಿಯಾದ ಡಾ.ಅಂಜಲಿ ನಿಂಬಾಳ್ಕರ್ ಅವರು ಅಮೇರಿಕಾದ ಮಹಿಳೆಯೊಬ್ಬರಿಗೆ ತುರ್ತು ವೈದ್ಯಕೀಯ ನೆರವಿನ ಅಗತ್ಯತೆಯನ್ನು ಅರಿತು, ತಕ್ಷಣವೇ ಸಿಪಿಆರ್ ನೀಡಿ ಮಹಿಳೆಯ ಪ್ರಾಣ ಉಳಿಸಿದ ವಿಚಾರ ಕೇಳಿ ಹೆಮ್ಮೆಯೆನಿಸಿತು. ವೈದ್ಯ ವೃತ್ತಿ ತೊರೆದು ಸಕ್ರಿಯ ರಾಜಕೀಯದಲ್ಲಿದ್ದರೂ ಸಕಾಲದಲ್ಲಿ ರೋಗಿಯೊಬ್ಬರ ನೆರವಿಗೆ ಧಾವಿಸಿದ ಅಂಜಲಿಯವರ ಸೇವಾ ಮನೋಭಾವ ಮತ್ತು ಸಮಯಪ್ರಜ್ಞೆ ಅತ್ಯಂತ ಶ್ಲಾಘನೀಯ. ಅಧಿಕಾರವಿರಲಿ, ಇಲ್ಲದಿರಲಿ ಜನಸೇವೆ ಎಂದು ಬಂದಾಗ ಪ್ರತಿಫಲಾಪೇಕ್ಷೆ ಇಲ್ಲದೆ ತನ್ನ ಕೈಲಾದ ಸಹಾಯಕ್ಕೆ ನಿಲ್ಲುವ ಅಂಜಲಿಯಂತವರು ಸಮಾಜಕ್ಕೆ ಮಾದರಿ. ನೂರುಕಾಲ ಅಂಜಲಿಯವರಿಗೆ ಆಯಸ್ಸು ಆರೋಗ್ಯ ನೀಡಿ, ಕಷ್ಟದಲ್ಲಿರುವ ಜೀವಗಳಿಗೆ ಅವರಿಂದ ಇನ್ನಷ್ಟು ನೆರವು ಸಿಗುವಂತಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ’
Leave a comment